ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm