ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm