ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm