ಬ್ರೇಕಿಂಗ್ ನ್ಯೂಸ್
15-04-23 01:49 pm HK News Desk ದೇಶ - ವಿದೇಶ
ಮಹಾರಾಷ್ಟ, ಎ.15: ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

40 ಜನರಿದ್ದ ಖಾಸಗಿ ಬಸ್ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ ಪುಣೆ ಮುಂಬೈ ಹೆದ್ದಾರಿಯ ಖೋಪೋಲಿಯಲ್ಲಿ ವೇಗವಾಗಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಇದರಿಂದ ಬಸ್ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ 12 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
)
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ಪಡೆ ಸಿಬ್ಬಂದಿ ಬಸ್ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದರು. ಬಸ್ ಬಿದ್ದ ರಭಸದ ಆಧಾರದ ಮೇಲೆ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಸಾಂಪ್ರದಾಯಿಕ ಸಂಗೀತ ತಂಡವೊಂದರ ಸದಸ್ಯರನ್ನು ಈ ಖಾಸಗಿ ಬಸ್ ಪುಣೆಯಿಂದ ಮುಂಬಯಿಗೆ ಕರೆದೊಯ್ಯುತ್ತಿತ್ತು. ಬೆಳಗಿನ ಜಾವ 4.50ರ ಸುಮಾರಿಗೆ ಹೆದ್ದಾರಿಯಲ್ಲಿನ ಶಿಂಗ್ರೋಬಾ ದೇವಸ್ಥಾನದ ಸಮೀಪ ಕಂದರವೊಂದಕ್ಕೆ ಬಸ್ ಉರುಳಿಬಿದ್ದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಬಸ್ನಲ್ಲಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು.
"ಮುಂಬಯಿಯ ಗೋರೆಗಾಂವ್ನ 'ಬಜಿ ಪ್ರಭು ವಾದಕ್ ಗ್ರೂಪ್' ಎಂಬ ಸಂಗೀತ ತಂಡದ ಸದಸ್ಯರನ್ನು ಬಸ್ ಕರೆದೊಯ್ಯುತ್ತಿತ್ತು. ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಈ ತಂಡವು ಗೋರೆಗಾಂವ್ಗೆ ಮರಳಿ ಬರುತ್ತಿತ್ತು. ಶನಿವಾರ ರಾತ್ರಿ 1 ಗಂಟೆಗೆ ಈ ತಂಡ ಸ್ಥಳದಿಂದ ಹೊರಟಿತ್ತು.
"ಮಹಾರಾಷ್ಟ್ರದ ರಾಯಗಡದಲ್ಲಿ ನಡೆದ ರಸ್ತೆ ಅಪಘಾತ ದುರದೃಷ್ಟಕರ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ. ಮೃತರ ಕುಟುಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
At least 12 youths were killed, while 27 others were injured after the bus they were travelling in, fell into a gorge on the old Mumbai-Pune highway in Maharashtra’s Raigad district on Saturday. according to police, the private bus carrying members of a traditional music troupe was en-route from Pune to Mumbai. The accident occurred around 4.50 am under the Khopoli police station limits, where the bus fell into the gorge near Shingroba temple.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm