ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm