ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm