ಬ್ರೇಕಿಂಗ್ ನ್ಯೂಸ್
16-04-23 03:41 pm HK News Desk ದೇಶ - ವಿದೇಶ
ಖಾರ್ಟೂಮ್, ಎ.16: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಭಾರತ ಮೂಲದ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗುಂಡಿನ ಗಾಯಗಳಾಗಿದ್ದು, ಆತ ಸೇನಾ ಗುಂಡಿಗೆ ಬಲಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಸೂಡಾನ್ನ ದಾಲ್ ಗ್ರೂಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆ ಆಲ್ಬರ್ಟ್ ಆಗಸ್ಟಿನ್ ನಿನ್ನೆ ದಾರಿತಪ್ಪಿ ಸಂಘರ್ಷ ಪೀಡಿತ ಪ್ರದೇಶಕ್ಕೆ ತೆರಳಿದ್ದಾಗ ಗುಂಡು ತಗುಲಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ" ಎಂದು ಸುಡಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಟ್ವೀಟ್ ಮಾಡಿದೆ.

ಅಂತೆಯೇ ರಾಯಭಾರ ಕಚೇರಿ ಆಗಸ್ಟೀನ್ ಅವರ ಕುಟುಂಬ ಮತ್ತು ವೈದ್ಯಕೀಯ ಪ್ರಾಧಿಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದೆ. ಇನ್ನು ಸೇನಾ ಸಂಘರ್ಷ ಘಟನೆಯಲ್ಲಿ 500ಕ್ಕೂ ಹೆಚ್ಚಿನವರಿಗೆ ಗಂಭೀರ ಗಾಯಗಳಾಗಿವೆ ಎಂದು ಸುಡಾನ್ ಕೇಂದ್ರ ವೈದ್ಯಕೀಯ ಮಂಡಳಿಯು ತಿಳಿಸಿದೆ.
ಈ ಘರ್ಷಣೆಯು ಇನ್ನೂ ಮುಂದುವರಿದಿದ್ದು ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ತಿಳಿಸಿವೆ. ಸುಡಾನ್ನ ರಾಜಧಾನಿಯಾದ ಖಾರ್ಟೂಮ್ ಪ್ರದೇಶದ ವಿವಿಧೆಡೆ ಶಸಸ್ತ್ರ ಸೇನೆ ಮತ್ತು ಅರೆಸೈನಿಕ ಪಡೆ ನಡುವೆ ನಡೆಯುತ್ತಿರುವ ಸಮರ ರಾಜಕೀಯ ಸಂಘರ್ಷವಾಗಿದೆ
ಶನಿವಾರ ಬೆಳಗ್ಗಿನಿಂದ ಅಲ್ಲಲ್ಲಿ ಸ್ವಲ್ಪಮಟ್ಟಿಗೆ ನಡೆಯುತ್ತಿದ್ದ ಸೈನಿಕರ ಸಂಘರ್ಷ ಬರಬರುತ್ತ ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಗುಂಡಿನ ಚಕಮಕಿಯಿಂದಾಗಿ ಸಾವುನೋವಿಗೆ ತುತ್ತಾದವರಲ್ಲಿ ಅಮಾಯಕ ನಾಗರಿಕರ ಸಂಖ್ಯೆಗಳನ್ನು ಮಾತ್ರ ಪ್ರಕಟಿಸಲಾಗಿದೆ.
ಸುಡಾನ್ನಲ್ಲಿರುವ ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಕ್ಕೆ ಪಡೆಯಲು ಯತ್ನಿಸಿತ್ತು. ಈ ಸಂದರ್ಭ ಮಿಲಿಟರಿ ಪ್ರತಿರೋಧ ಒಡ್ಡಿದೆ. ಆಗ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.
A total of 56 civilians were killed and 595 others were wounded in clashes across Sudan, the Central Committee of Sudan Doctors said early on Sunday, a day after fighting broke out between Sudan's military and a government paramilitary force.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm