ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm