ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm