ಬ್ರೇಕಿಂಗ್ ನ್ಯೂಸ್
27-10-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ಕಾಯ್ದೆ ರದ್ದಾದ ಬಳಿಕ ಬದಲಾವಣೆಯ ಗಾಳಿ ಬೀಸಲು ಆರಂಭಿಸಿದೆ. ಇದೀಗ ಆ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಕುದುರಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ ಹೊರಡಿಸಿದ್ದು, ದೇಶದ ಯಾವುದೇ ಭಾಗದ ಜನ ಜಮ್ಮು ಕಾಶ್ಮೀರದಲ್ಲಿ ಭೂಮಿ ಖರೀದಿಸಲು ಅವಕಾಶ ನೀಡಿದೆ.
ಕಳೆದ ಬಾರಿ ಜಮ್ಮು ಕಾಶ್ಮೀರದ ವಿವಾದಾತ್ಮಕ ಕಾಯ್ದೆ 370 ಮತ್ತು 35 ಎ ಕಾಯ್ದೆಗಳನ್ನು ರದ್ದುಪಡಿಸಿದ ಬಳಿಕ ಆಸ್ತಿ ಖರೀದಿಗೆ ಅವಕಾಶ ಮುಕ್ತ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿರಲಿಲ್ಲ. ಪ್ರವಾಸೋದ್ಯಮ ಉತ್ತೇಜನಕ್ಕೂ ಯಾವುದೇ ಹೊಸ ಯೋಜನೆ ಪ್ರಕಟಿಸಿರಲಿಲ್ಲ. ಇದೀಗ ಜಮ್ಮು ಕಾಶ್ಮೀರದಲ್ಲಿಯೂ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ -2016 (ರೇರಾ) ಅನ್ನು ಅಳವಡಿಸಿ ಕೇಂದ್ರ ಸರಕಾರ ಆದೇಶ ಮಾಡಿದೆ. ಅಲ್ಲದೆ, ಆಸ್ತಿ ಖರೀದಿ ವಿಚಾರದಲ್ಲಿ ನಿಯಮಗಳನ್ನು ಸರಳಗೊಳಿಸಿದೆ.
ಇದರೊಂದಿಗೆ ತಕ್ಷಣದಿಂದಲೇ ಜಮ್ಮು ಕಾಶ್ಮೀರದಲ್ಲಿ ರೇರಾ ಕಾಯ್ದೆ ಜಾರಿಗೆ ಬರಲಿದ್ದು, ಯಾರು ಬೇಕಾದರೂ ಆಸ್ತಿ ಖರೀದಿಸಿ ವಾಸ ಮಾಡಬಹುದು. ಅಲ್ಲದೆ, ಅಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ತೀವ್ರ ಗತಿ ಪಡೆಯಲಿದೆ. ಈ ಹಿಂದೆ ಆರ್ಟಿಕಲ್ 35 ಎ ಕಾರಣದಿಂದ ಜಮ್ಮು ಕಾಶ್ಮೀರ ಹೊರತುಪಡಿಸಿ ದೇಶದ ಇತರೇ ಪ್ರಜೆಗಳು ಆಸ್ತಿ ಖರೀದಿಸಲು ಅವಕಾಶ ಇರಲಿಲ್ಲ.
ದೇಶದ ಇತರ ಪ್ರಜೆಗಳಿಗೂ ಆಸ್ತಿ ಖರೀದಿಸಲು ಕೇಂದ್ರ ಅವಕಾಶ ನೀಡಿರುವುದನ್ನು ಜಮ್ಮು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರವನ್ನು ಕೇಂದ್ರ ಮಾರಾಟಕ್ಕಿಟ್ಟಿದೆ. ಭೂಮಿಯ ಹಸ್ತಾಂತರ ಪ್ರಕ್ರಿಯೆ ಸರಳಗೊಳಿಸಿದ್ದರಿಂದ ಬಡವರಿಗೆ ಕಷ್ಟವಾಗಲಿದೆ ಎಂದಿದ್ದಾರೆ.
In a significant move, the Centre has paved the way for people from outside Jammu and Kashmir to buy land in the Union territory (UT) by amending several laws.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm