ಬ್ರೇಕಿಂಗ್ ನ್ಯೂಸ್
18-05-23 08:35 pm HK News Desk ದೇಶ - ವಿದೇಶ
ನಾಗಪುರ, ಮೇ 18: ಗುಜರಾತ್ ಮೂಲದ ವ್ಯಕ್ತಿಯೊಬ್ಬ ತನ್ನನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪಿಎ ಎಂದು ಹೇಳಿಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರನ್ನು ಸಂಪರ್ಕಿಸಿ, ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ಹಣ ಪೀಕಿಸಲು ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಮೋರ್ಬಿ ಜಿಲ್ಲೆಯ ನೀರಜ್ ಸಿಂಗ್ ರಾಥೋಡ್ ಬಂಧಿತ ವ್ಯಕ್ತಿ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರದಲ್ಲಿ ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ನೀರಜ್ ಸಿಂಗ್ ಹಲವು ಬಿಜೆಪಿ ಶಾಸಕರನ್ನು ಸಂಪರ್ಕಿಸಿದ್ದು ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದ. ಬಿಜೆಪಿ ಶಾಸಕರಾದ ವಿಕಾಸ್ ಕಾಂಭರೆ, ತೇಕ್ ಚಂದ್ ಸಾವರ್ಕರ್, ತಾನಾಜಿ ಮುಟ್ಕುಲೆ, ನಾರಾಯಣ್ ಕುಛೆ ಇವರನ್ನು ಸಂಪರ್ಕಿಸಿದ್ದ ನೀರಜ್ ಸಿಂಗ್, ಮುಂದಿನ ಬಾರಿ ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ಕೊಡಿಸುತ್ತೇನೆಂದು ನಂಬಿಸಿದ್ದ. ಅಲ್ಲದೆ, ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದಲ್ಲದೆ, ಫೋನಲ್ಲಿ ಜೆಪಿ ನಡ್ಡಾ ರೀತಿಯಲ್ಲೇ ಶಾಸಕರ ಜೊತೆಗೆ ಮಾತನಾಡುವಂತೆಯೂ ನೀರಜ್ ಸಿಂಗ್ ಮಾಡಿದ್ದ. ಶಾಸಕ ವಿಕಾಸ್ ಕಾಂಬರೆ ಅವರಿಗೆ ನಾಲ್ಕು ಬಾರಿ ಫೋನ್ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿದ್ದ. ಪದೇ ಪದೇ ಫೋನ್ ಬಂದಿದ್ದರಿಂದ ಸಂಶಯಗೊಂಡ ವಿಕಾಸ್ ಕಾಂಬರೆ, ನಾಗಪುರ ಪೊಲೀಸರಿಗೆ ದೂರು ಕೊಟ್ಟಿದ್ದರು. 5-6 ಬಾರಿ ಫೋನಾಯಿಸಿ, ಗುಜರಾತಿನಲ್ಲಿ ದೊಡ್ಡ ಕಾರ್ಯಕ್ರಮ ನಡೆಸಲು ಹಣ ಎರೇಂಜ್ ಮಾಡುವಂತೆ ಜೆಪಿ ನಡ್ಡಾ ಪಿಎ ಹೆಸರಲ್ಲಿ ಕರೆ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಗುಜರಾತಿನ ನಕಲಿ ಪಿಎ ವ್ಯಕ್ತಿಯನ್ನು ಬಂಧಿಸಿದ್ದಾರೆ.
The man from Gujarat's Ahmedabad arrested for allegedly taking money from three MLAs in Maharashtra on the promise of ministerial berths in the Eknath Shinde-led state government is being brought to Nagpur by the police for further action, a senior official said on Wednesday.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm