ಬ್ರೇಕಿಂಗ್ ನ್ಯೂಸ್
29-10-20 08:55 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಅಕ್ಟೋಬರ್ 29 : ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಹಂತದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೇಶಾದ್ಯಂತ ದಿಢೀರ್ ಲಾಕ್ಡೌನ್ ಘೋಷಣೆ ಮಾಡಿದ್ದು ಡಿಸೆಂಬರ್ 1ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.

ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಫ್ರಾನ್ಸ್ ನಲ್ಲಿ ಎರಡನೇ ಬಾರಿ ಲಾಕ್ ಡೌನ್ ಹೇರಲಾಗಿದೆ. ರೆಸ್ಟೋರೆಂಟ್, ಬಾರ್ ಗಳಿಗೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದು ಅಗತ್ಯ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಆರ್ಥಿಕತೆಗೆ ಪೆಟ್ಟು ಬೀಳದಂತೆ ಸಾರ್ವಜನಿಕ ಉದ್ದಿಮೆಗಳು, ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಫ್ರಾನ್ಸ್ ದೇಶದ ಎಲ್ಲೆಡೆ ಹರಡುತ್ತಿದ್ದು ನವೆಂಬರ್ ತಿಂಗಳಲ್ಲಿ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಇನ್ನು ಪ್ಯಾರಿಸ್ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಾರಗಳ ಹಿಂದೆ ಕರ್ಫ್ಯೂ ಹಾಕಲಾಗಿತ್ತು. ಆದರೆ, ಅದು ವಿಫಲವಾಗಿದೆ ಎನ್ನಲಾಗುತ್ತಿದೆ. ಫ್ರಾನ್ಸ್ ನಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ 35 ಸಾವಿರ ಮಂದಿ ಬಲಿಯಾಗಿದ್ದಾರೆ. ಯುರೋಪ್ ನ ಇತರ ಭಾಗದಲ್ಲಿಯೂ ಎರಡನೇ ಹಂತದ ಕೊರೊನಾ ಸೋಂಕು ಮೊದಲ ಹಂತಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇರಲಿದೆ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಸದ್ಯಕ್ಕೆ ಮೂರು ಸಾವಿರ ಇಂಟೆನ್ಸಿವ್ ಕೇರ್ ಬೆಡ್ ಫುಲ್ ಆಗಿದ್ದು ನವೆಂಬರ್ ವೇಳೆಗೆ ಅದು 9 ಸಾವಿರಕ್ಕೆ ತಲುಪಲಿದೆ ಎನ್ನುವ ಅಂದಾಜಿದೆ. ಸದ್ಯಕ್ಕೆ 5800 ಐಸಿಯು ಕೆಪಾಸಿಟಿ ಇದ್ದು ಅದನ್ನು ಹತ್ತು ಸಾವಿರಕ್ಕೆ ಏರಿಸುವ ಗುರಿಯಿದೆ ಎಂದಿದ್ದಾರೆ ಮ್ಯಾಕ್ರನ್. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಲಾಕ್ಡೌನ್ ಬಳಿಕದ ಎರಡು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm