ಬ್ರೇಕಿಂಗ್ ನ್ಯೂಸ್
29-05-23 12:01 pm HK News Desk ದೇಶ - ವಿದೇಶ
ಗುವಾಹಟಿ, ಮೇ 29: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸರಕು ಸಾಗಣೆ ಟ್ರಕ್ ನಲ್ಲಿದ್ದ 6 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಮೃತರು 7 ಮಂದಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಲುಕ್ಬರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವ ಮತ್ತು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತೀವ್ರ ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
Seven students of Assam Engineering College were killed and six others injured in a road accident in Guwahati on Monday, police said. Ten third-year students left the college premises in a car early this morning, and their speeding vehicle hit a road divider and then collided with a pick-up van in Jalukbari area of the city, an officer said.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm