ಬ್ರೇಕಿಂಗ್ ನ್ಯೂಸ್
30-10-20 11:24 am Headline Karnataka News Network ದೇಶ - ವಿದೇಶ
ಶ್ರೀನಗರ, ಅ.30: ಜಿಲ್ಲಾ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಭಾರತೀಯ ಜನತಾ ಪಕ್ಷದ ಮೂರು ಮಂದಿ ಕಾರ್ಯಕರ್ತರನ್ನು ಶಂಕಿತ ಉಗ್ರರು ದಕ್ಷಿಣ ಕಾಶ್ಮೀರದ ಕುಲುಗಾಂನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರಲ್ಲಿ ಕುಲುಗಾಂ ಬಿಜೆಪಿ ಯುವ ಘಟಕದ ಪದಾಧಿಕಾರಿ ಫಿದಾ ಹುಸೈನ್ ಯಾತೂ ಮತ್ತು ಸಹ ಕಾರ್ಯಕರ್ತರಾದ ಉಮರ್ ರಶೀದ್ ಬೇಗ್ ಹಾಗೂ ಉಮರ್ ರಮ್ಝಾನ್ ಹಜಮ್ ಸೇರಿದ್ದಾರೆ. ರಾತ್ರಿ 8:20ರ ವೇಳೆಗೆ ಖಾಝಿಗುಂಡ್ ಗ್ರಾಮದ ವೈ.ಕೆ.ಪುರದಲ್ಲಿ ಈ ದಾಳಿ ನಡೆದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ಪ್ರಕಟಿಸಿದ್ದಾರೆ. ಮೂವರೂ ಖಾಝಿಗುಂಡ್ ತುರ್ತು ಆಸ್ಪತ್ರೆಗೆ ಮೃತ ಸ್ಥಿತಿಯಲ್ಲಿ ತರಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಅಸೀಮಾ ನಝೀರ್ ಹೇಳಿದ್ದಾರೆ.

ಬಂಡೀಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶೇಕ್ ವಸೀಮ್ ಬಾರಿ ಅವರ ತಂದೆ ಮತ್ತು ಸಹೋದರನನ್ನು ಜುಲೈನಲ್ಲಿ ಹತ್ಯೆ ಮಾಡಿದಾಗಿನಿಂದ ಈ ವರ್ಷ ಇದುವರೆಗೆ ಒಂಬತ್ತು ಮಂದಿ ಬಿಜೆಪಿ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಯಾವುದೇ ಉಗ್ರ ಸಂಘಟನೆ ಈ ಹತ್ಯೆಯ ಹೊಣೆ ಹೊತ್ತಿಲ್ಲ. ಕಳೆದ ಜೂನ್ನಿಂದೀಚೆಗೆ ಉಗ್ರ ಸಂಘಟನೆಗಳು ವಿವಿಧ ಪಕ್ಷಗಳ ತಳಮಟ್ಟದ ಕಾರ್ಯಕರ್ತರನ್ನು ಗುರಿಯಾಗಿಸಿವೆ.
ಜೂನ್ 8ರಂದು ಕಾಂಗ್ರೆಸ್ ಸರಪಂಚ ಅಜಯ್ ಪಂಡಿತ ಅವರನ್ನು ಅನಂತ್ನಾಗ್ನಲ್ಲಿ ಹತ್ಯೆ ಮಾಡಿದ ಬಳಿಕ ಬಿಜೆಪಿಗೂ ಉಗ್ರದಾಳಿ ತಟ್ಟಿದೆ. ಜೆಇಎಂ ಮತ್ತು ಎಲ್ಇಟಿ ದಾಳಿಯ ಭೀತಿ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆಗಸ್ಟ್ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸರಪಂಚರನ್ನು ಮತ್ತು ಕಾರ್ಯಕರ್ತರನ್ನು ದಕ್ಷಿಣ ಕಾಶ್ಮೀರದಲ್ಲಿ ಸುರಕ್ಷಿತ ಮನೆಗಳಿಗೆ ಸ್ಥಳಾಂತರಿಸಿದ್ದರು.
Suspected terrorists on Thursday shot dead three Bharatiya Janata Party (BJP) workers in South Kashmir’s Kulgam district, police officials said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm