ಬ್ರೇಕಿಂಗ್ ನ್ಯೂಸ್
30-10-20 11:24 am Headline Karnataka News Network ದೇಶ - ವಿದೇಶ
ಶ್ರೀನಗರ, ಅ.30: ಜಿಲ್ಲಾ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಭಾರತೀಯ ಜನತಾ ಪಕ್ಷದ ಮೂರು ಮಂದಿ ಕಾರ್ಯಕರ್ತರನ್ನು ಶಂಕಿತ ಉಗ್ರರು ದಕ್ಷಿಣ ಕಾಶ್ಮೀರದ ಕುಲುಗಾಂನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರಲ್ಲಿ ಕುಲುಗಾಂ ಬಿಜೆಪಿ ಯುವ ಘಟಕದ ಪದಾಧಿಕಾರಿ ಫಿದಾ ಹುಸೈನ್ ಯಾತೂ ಮತ್ತು ಸಹ ಕಾರ್ಯಕರ್ತರಾದ ಉಮರ್ ರಶೀದ್ ಬೇಗ್ ಹಾಗೂ ಉಮರ್ ರಮ್ಝಾನ್ ಹಜಮ್ ಸೇರಿದ್ದಾರೆ. ರಾತ್ರಿ 8:20ರ ವೇಳೆಗೆ ಖಾಝಿಗುಂಡ್ ಗ್ರಾಮದ ವೈ.ಕೆ.ಪುರದಲ್ಲಿ ಈ ದಾಳಿ ನಡೆದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ಪ್ರಕಟಿಸಿದ್ದಾರೆ. ಮೂವರೂ ಖಾಝಿಗುಂಡ್ ತುರ್ತು ಆಸ್ಪತ್ರೆಗೆ ಮೃತ ಸ್ಥಿತಿಯಲ್ಲಿ ತರಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಅಸೀಮಾ ನಝೀರ್ ಹೇಳಿದ್ದಾರೆ.
ಬಂಡೀಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶೇಕ್ ವಸೀಮ್ ಬಾರಿ ಅವರ ತಂದೆ ಮತ್ತು ಸಹೋದರನನ್ನು ಜುಲೈನಲ್ಲಿ ಹತ್ಯೆ ಮಾಡಿದಾಗಿನಿಂದ ಈ ವರ್ಷ ಇದುವರೆಗೆ ಒಂಬತ್ತು ಮಂದಿ ಬಿಜೆಪಿ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಯಾವುದೇ ಉಗ್ರ ಸಂಘಟನೆ ಈ ಹತ್ಯೆಯ ಹೊಣೆ ಹೊತ್ತಿಲ್ಲ. ಕಳೆದ ಜೂನ್ನಿಂದೀಚೆಗೆ ಉಗ್ರ ಸಂಘಟನೆಗಳು ವಿವಿಧ ಪಕ್ಷಗಳ ತಳಮಟ್ಟದ ಕಾರ್ಯಕರ್ತರನ್ನು ಗುರಿಯಾಗಿಸಿವೆ.
ಜೂನ್ 8ರಂದು ಕಾಂಗ್ರೆಸ್ ಸರಪಂಚ ಅಜಯ್ ಪಂಡಿತ ಅವರನ್ನು ಅನಂತ್ನಾಗ್ನಲ್ಲಿ ಹತ್ಯೆ ಮಾಡಿದ ಬಳಿಕ ಬಿಜೆಪಿಗೂ ಉಗ್ರದಾಳಿ ತಟ್ಟಿದೆ. ಜೆಇಎಂ ಮತ್ತು ಎಲ್ಇಟಿ ದಾಳಿಯ ಭೀತಿ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆಗಸ್ಟ್ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸರಪಂಚರನ್ನು ಮತ್ತು ಕಾರ್ಯಕರ್ತರನ್ನು ದಕ್ಷಿಣ ಕಾಶ್ಮೀರದಲ್ಲಿ ಸುರಕ್ಷಿತ ಮನೆಗಳಿಗೆ ಸ್ಥಳಾಂತರಿಸಿದ್ದರು.
Suspected terrorists on Thursday shot dead three Bharatiya Janata Party (BJP) workers in South Kashmir’s Kulgam district, police officials said.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm