ಬ್ರೇಕಿಂಗ್ ನ್ಯೂಸ್
04-06-23 08:55 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 4: ಬಾಲಸೋರ್ ರೈಲು ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಲು ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೇಶದ ಘನಘೋರ ರೈಲು ದುರಂತ ಇದಾಗಿದ್ದು, 290ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದರು. ಸಾವಿರಾರು ಮಂದಿ ಗಾಯಗೊಂಡಿದ್ದರೆ, 50 ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರವಾಗಿದೆ. ಈ ನಡುವೆ, ಬಾಲಸೋರ್ನ ಎರಡು ರೈಲು ಮಾರ್ಗಗಳನ್ನು ಭಾನುವಾರ ರಾತ್ರಿ ಪುನಃಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ದುರಂತ ಪ್ರದೇಶದಲ್ಲಿ ಹಳಿಗಳ ಮರುಸ್ಥಾಪನೆ ಕಾರ್ಯ ವೇಗವಾಗಿ ನಡೆಯುತ್ತಿದೆ ಎಂದು ಸಚಿವರು ಟ್ವೀಟ್ಗಳಲ್ಲಿ ಉಲ್ಲೇಖಿಸಿದ್ದಾರೆ. ಬಾಲಸೋರ್ನ ಅಪಘಾತ ಸ್ಥಳದಲ್ಲಿ ಓವರ್ಹೆಡ್ ವಿದ್ಯುದ್ದೀಕರಣ ಕಾರ್ಯ ಆರಂಭವಾಗಿದೆ ಎಂದವರು ತಿಳಿಸಿದ್ದಾರೆ.
ದುರಂತದಲ್ಲಿ ಸಾವನ್ನಪ್ಪಿದ ಸುಮಾರು 290 ಜನರು ವಿವಿಧ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ ಮೃತರನ್ನು ಗುರುತಿಸುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಮೃತರ ಫೋಟೋಗಳನ್ನು ಮೂರು ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ರೈಲು ಪ್ರಯಾಣಿಕರ ವಿವರಗಳನ್ನು ಮೃತರ ಛಾಯಾಚಿತ್ರಗಳೊಂದಿಗೆ Special Relief Commissioner (SRC), Bhubaneswar Municipal Corporation ಮತ್ತು Odisha State Disaster Management Authority ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ಒಡಿಶಾ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
1929 ಸಹಾಯವಾಣಿಗೆ ಕರೆ ಮಾಡಲು ಸೂಚನೆ
ಆದರೆ ಸತ್ತವರ ಚಿತ್ರಗಳು ಭಯಾನಕವಾಗಿವೆ ಎಂದವರು ಹೇಳಿದ್ದು ಈ ಹಿನ್ನೆಲೆಯಲ್ಲಿ ಒಡಿಶಾ ಪರಿಹಾರ ಆಯೋಗದ ಲಿಖಿತ ಅನುಮತಿ ಇಲ್ಲದೆ ಯಾರೂ ಈ ಫೋಟೋಗಳನ್ನು ಪ್ರಕಟಿಸಬಾರದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಗುರುತಿಸಿದ ಸಂತ್ರಸ್ತರ ಕುಟುಂಬಗಳು 1929 ಸಹಾಯವಾಣಿಗೆ ಕರೆ ಮಾಡಲು ತಿಳಿಸಲಾಗಿದೆ.
ಒಡಿಶಾದ ರಾಜಧಾನಿ ಭುವನೇಶ್ವರದ ಮುನ್ಸಿಪಲ್ ಕಮಿಷನರ್ ಕಚೇರಿಯಲ್ಲಿ ಕಂಟ್ರೋಲ್ ರೂಮ್ ಸಹ ಸ್ಥಾಪಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವವರ ವಿವರಗಳು, ಮೃತರ ವಿವರಗಳು, ಮಾಹಿತಿ ಮತ್ತು ಮೃತದೇಹಗಳನ್ನು ಗುರುತಿಸಲು ಸಹಾಯ ಮಾಡಲು ಜನರು ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ವೆಬ್ಸೈಟ್ಗಳ ಲಿಂಕ್ ಮೂಲಕ ರೈಲು ಅಪಘಾತಕ್ಕೊಳಗಾದವರನ್ನು ಸಹ ಪತ್ತೆಹಚ್ಚಬಹುದು ಎಂದು ಉಲ್ಲೇಖಿಸಲಾಗಿದೆ.
The Union Railway minister Ashwini Vaishnaw on Sunday said that the railway board has recommended a Central Bureau of Investigation (CBI) probe into the horrific triple train accident in Odisha's Balasore that killed at least 275 people and injured over 1,100.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm