ಬ್ರೇಕಿಂಗ್ ನ್ಯೂಸ್
07-06-23 10:32 pm HK News Desk ದೇಶ - ವಿದೇಶ
ಕೊಲ್ಲಾಪುರ (ಮಹಾರಾಷ್ಟ್ರ), ಜೂನ್ 7 : ಸೋಷಿಯಲ್ ಮೀಡಿಯಾಗಳಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬನನ್ನು ವೈಭವೀಕರಿಸಿ ಹಂಚಿಕೊಂಡಿದ್ದು ಕೊಲ್ಲಾಪುರದಲ್ಲಿ ಹಿಂಸೆ ಹೊತ್ತಿಕೊಳ್ಳುವಂತೆ ಮಾಡಿದೆ. ಮುಸ್ಲಿಂ ಸಂಘಟನೆ ಸದಸ್ಯರು ಟಿಪ್ಪು ಮತ್ತು ಮೊಘಲ್ ದೊರೆ ಔರಂಗಜೇಬನ ಫೋಟೊ ಮತ್ತು ಆಕ್ಷೇಪಾರ್ಹ ಆಡಿಯೋ ಒಂದನ್ನು ಹಂಚಿಕೊಂಡಿದ್ದು ಒಂದು ಕೋಮಿನ ಸದಸ್ಯರು ಅದನ್ನು ತಮ್ಮ ಸ್ಟೇಟಸ್, ಪ್ರೊಫೈಲ್ ಗಳಲ್ಲಿ ಹಾಕ್ಕೊಂಡಿದ್ದರು. ಈ ರೀತಿಯ ಬೆಳವಣಿಗೆ ಖಂಡಿಸಿ ಹಿಂದು ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದು ಈ ವೇಳೆ ಕಲ್ಲು ತೂರಾಟ, ಹಿಂಸಾಚಾರ ನಡೆದಿದೆ.
ಟಿಪ್ಪು ಸುಲ್ತಾನ್ ಚಿತ್ರವನ್ನು ಆಕ್ಷೇಪಾರ್ಹ ‘ಆಡಿಯೋ’ ಸಂದೇಶದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿರುವುದನ್ನು ಖಂಡಿಸಿ ಹಿಂದು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ್ದವು. ಮತ್ತೊಂದು ವರದಿಯ ಪ್ರಕಾರ ಸ್ಥಳೀಯರು ಮೊಘಲ್ ಚಕ್ರವರ್ತಿ ಔರಂಗಜೇಬ್ ಅನ್ನು ಬೆಂಬಲಿಸುವ ಪೋಸ್ಟ್ಗಳನ್ನು ಹಾಕಿರುವುದು ವಿವಾದದ ಕಿಡಿಗೆ ತುಪ್ಪ ಸುರಿದಂತಾಗಿದೆ. ಇದನ್ನು ವಿರೋಧಿಸಿ ಶಿವಸೇನೆಯ ಸದಸ್ಯರು ಬೀದಿಗಿಳಿದಿದ್ದು ಟಿಪ್ಪು, ಔರಂಗಜೇಬನ್ನು ವೈಭವೀಕರಿಸಿದವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಮುಗಿದು ಹಿಂತಿರುಗುವಷ್ಟರಲ್ಲಿ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಕಲ್ಲು ತೂರಾಟ ಆಗಿದ್ದು ಎರಡು ಗುಂಪುಗಳ ಸದಸ್ಯರು ಬೀದಿಗಿಳಿದು ಹಿಂಸೆಗೆ ತೊಡಗಿದ್ದಾರೆ.



![]()

ಘಟನೆ ಬಳಿಕ ಪೊಲೀಸ್ ಭದ್ರತೆ ಹೆಚ್ಚಿಸಿದ್ದು ಉದ್ರಿಕ್ತರನ್ನು ಚದುರಿಸಿದ್ದಾರೆ. ಹೆಚ್ಚುವರಿ ಪಡೆ ನಿಯೋಜನೆ ಮಾಡಲಾಗಿದೆ. ಈವರೆಗೆ 21 ಮಂದಿಯನ್ನು ಬಂಧಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ಜನರು ಶಾಂತವಾಗಿರುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮನವಿ ಮಾಡಿದ್ದು, ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳದಿರಿ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡುವುದಿಲ್ಲ ಎಂದು ಶಿಂಧೆ ಹೇಳಿದ್ದಾರೆ.




ನಿರ್ದಿಷ್ಟ ಸಮುದಾಯದ ಒಂದು ವರ್ಗದ ಜನರು ಮೊಘಲ್ ಚಕ್ರವರ್ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸುವುದು ಕೇವಲ ಕಾಕತಾಳೀಯವಾಗಿರಲು ಸಾಧ್ಯವಿಲ್ಲ ಎಂದು ಡಿಸಿಎಂ ಫಡ್ನವಿಸ್ ಹೇಳಿದ್ದಾರೆ.
A row has erupted in Maharashtra’s Kolhapur over social media posts on Muslim rulers including Aurangzeb and Tipu Sultan on Wednesday. According to the reports, some rightwing outfits have staged a massive protest in the state’s Kolhapur. They have been protesting over social media posts on Aurangzeb and Tipu Sultan, which they claim are “constroversial”.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm