ಬ್ರೇಕಿಂಗ್ ನ್ಯೂಸ್
31-10-20 12:16 pm Headline Karnataka News Network ದೇಶ - ವಿದೇಶ
ಅಯೋಧ್ಯೆ, ಅಕ್ಟೋಬರ್ 30: ಸುದೀರ್ಘ 28 ವರ್ಷಗಳ ಬಳಿಕ ದೀಪಾವಳಿ ಹಬ್ಬಕ್ಕೆ ಅಯೋಧ್ಯೆ ಝಗಮಗಿಸಲಿದೆ. ಈವರೆಗೂ ಟೆಂಟ್ ಒಳಗಿದ್ದ ರಾಮನ ವಿಗ್ರಹಕ್ಕೆ ದೀಪಗಳ ಹಬ್ಬದ ಸಡಗರದ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರತಿ ಎತ್ತಲಿದ್ದಾರೆ.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ಬಳಿಕ ವಿವಾದಿತ ಪ್ರದೇಶವಾಗಿದ್ದ ಅಯೋಧ್ಯೆಯಲ್ಲಿ ಯಾವುದೇ ಹಬ್ಬಗಳ ಆಚರಣೆಗೂ ಅನುಮತಿ ಇರಲಿಲ್ಲ. ಈ ಬಾರಿ ಅಯೋಧ್ಯೆ ವಿವಾದ ಮುಕ್ತವಾಗಿದ್ದು, ಭವ್ಯ ರಾಮಮಂದಿರ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ, ದೀಪಾವಳಿ ಹಬ್ಬವನ್ನು ಸಡಗರದಿಂದ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.


ಇಷ್ಟು ವರ್ಷಗಳ ಕಾಲ ಪುಟ್ಟ ಟೆಂಟ್ ನಲ್ಲಿದ್ದ ರಾಮನ ವಿಗ್ರಹವನ್ನು ಮಂದಿರ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಆವರಣಕ್ಕೆ ಸ್ಥಳಾಂತರಿಸಿ ಪೂಜಿಸಲಾಗುತ್ತಿದೆ. ದಿನವೂ ಅರ್ಚನೆ, ಪೂಜೆಗಳು ನಡೆಯುತ್ತಿವೆ. ಇದೇ ಜಾಗದಲ್ಲಿ ಈ ಬಾರಿ ದೀಪಾವಳಿ ಆಚರಿಸಲಾಗುತ್ತಿದೆ. ದೀಪಾವಳಿಗೆ ಇಡೀ ರಾಮಮಂದಿರ ಪರಿಸರದಲ್ಲಿ ಲಕ್ಷಾಂತರ ದೀಪಗಳನ್ನು ಹಚ್ಚಿ ಬೆಳಗಿಸಲು ಯೋಜನೆ ಹಾಕಲಾಗಿದೆ. ಮಂದಿರದ ಆವರಣದಲ್ಲಿ ಅಲ್ಲದೆ, ರಾಮ ನಿರ್ಯಾಣಗೊಂಡ ಸರಯೂ ನದಿ ತೀರದಲ್ಲಿಯೂ ಲಕ್ಷಾಂತರ ದೀಪಗಳನ್ನು ಬೆಳಗಿಸಿ ವಿಶಿಷ್ಟವಾಗಿ ದೀಪಗಳ ಹಬ್ಬವನ್ನು ಆಚರಿಸಲು ಯೋಜನೆ ಹಾಕುತ್ತಿದ್ದಾರೆ.
ಕಳೆದ ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿತ್ತು. ಅಂದು ಕೂಡ ಇಡೀ ಅಯೋಧ್ಯೆಯನ್ನು ಶೃಂಗರಿಸಿ ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸಿದ್ದರು. ಈ ಬಾರಿ ಮೋದಿ ದೀಪಾವಳಿಗೆ ಅಯೋಧ್ಯೆ ಅಥವಾ ವಾರಣಾಸಿಗೆ ಬರುವುದು ಇನ್ನೂ ಅಂತಿಮಗೊಂಡಿಲ್ಲ.
For the first time since 1992, Diwali will be celebrated in the earlier disputed area where the foundation stone for the Ram Temple construction was laid back in August.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm