ಬ್ರೇಕಿಂಗ್ ನ್ಯೂಸ್
31-10-20 12:50 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 31: ಮತಾಂತರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇವಲ ಮದುವೆಯ ಕಾರಣಕ್ಕೆ ಮತಾಂತರ ಆಗುವುದನ್ನು ಒಪ್ಪಲಾಗಲ್ಲ. ಸಮಾಜಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಕರಣ ಒಂದಕ್ಕೆ ಸಂಬಂಧಿಸಿ ಅಭಿಪ್ರಾಯ ಪಟ್ಟಿದೆ. ತಮಗೆ ಪೊಲೀಸರ ರಕ್ಷಣೆ ನೀಡಬೇಕೆಂದು ಹೇಳಿ ವಿವಾಹಿತ ದಂಪತಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ಪಟ್ಟಿದ್ದು, ದಂಪತಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ.
ನ್ಯಾಯಾಧೀಶ ಮಹೇಶ್ ಚಂದ್ರ ತ್ರಿಪಾಠಿ, 2014ರ ತಮ್ಮದೇ ಕೋರ್ಟಿನ ತೀರ್ಪನ್ನು ಉಲ್ಲೇಖಿಸಿ ಈ ಅಭಿಪ್ರಾಯ ನೀಡಿದ್ದಾರೆ. ಯುವತಿ ಮುಸ್ಲಿಂ ಹಾಗೂ ಯುವಕ ಹಿಂದು ಎನ್ನುವುದು ತಿಳಿದಿದ್ದು, ಯುವತಿ ತಿಂಗಳ ಹಿಂದೆ ಮತಾಂತರ ಆಗಿರುವುದೂ ತಿಳಿದಿದೆ. ಇಂಥ ಸಂದರ್ಭದಲ್ಲಿ ಕೇವಲ ಮದುವೆಯ ಉದ್ದೇಶಕ್ಕೆ ಮತಾಂತರ ಆಗಿರುವುದು ಕಂಡುಬರುತ್ತದೆ. ಇದನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ, ಇದು ಸಂವಿಧಾನದ 226ನೇ ವಿಧಿ ಅನ್ವಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.


2014ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ಮದುವೆಯಾಗುವ ಕಾರಣಕ್ಕೆ ಮತಾಂತರ ಆಗುವುದು ಸ್ವೀಕಾರಾರ್ಹವಲ್ಲ ಎಂದು ತೀರ್ಪು ನೀಡಿತ್ತು. ಅಂದಿನ ಪ್ರಕರಣದಲ್ಲಿ ಯುವತಿ ಹಿಂದುವಾಗಿದ್ದು, ಯುವಕ ಮುಸ್ಲಿಂ ಆಗಿದ್ದ. ಯುವತಿ ಮತಾಂತರ ಆದ ತಿಂಗಳ ಬಳಿಕ ಮದುವೆಯಾಗಿ, ಕೋರ್ಟಿನಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನು ವಜಾಗೊಳಿಸಿ, ಇದೇ ರೀತಿಯ ತೀರ್ಪು ನೀಡಿತ್ತು.
ಅಲ್ಲದೆ, ಇಸ್ಲಾಂ ಧರ್ಮದ ಹುಡುಗನ ಜೊತೆ ಸ್ನೇಹ ಇದ್ದ ಕಾರಣಕ್ಕೆ ಇಸ್ಲಾಂ ಬಗ್ಗೆ ನಂಬಿಕೆ ಇಲ್ಲದ ಯುವತಿ ಕೇವಲ ಮದುವೆಯ ಕಾರಣಕ್ಕೆ ತನ್ನ ಧರ್ಮ ಬದಲಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿತ್ತು.
Religious conversion only for the purpose of marriage is unacceptable, the Allahabad high court has dismissed a petition filed by an interfaith couple seeking directions to police and the girl’s father not to interfere in their married life.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm