ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.


ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm