ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm