ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am