ಬ್ರೇಕಿಂಗ್ ನ್ಯೂಸ್
12-06-23 09:54 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 12: ಒಡಿಶಾ ರೈಲು ದುರಂತ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಬಹನಾಗ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಶನ್ ಮ್ಯಾನೇಜರ್ ಸಹಿತ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂದು ವಾರದಿಂದ ಹತ್ತು ಮಂದಿ ಸಿಬಿಐ ಅಧಿಕಾರಿಗಳು ರೈಲು ದುರಂತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂಬತ್ತು ಮಂದಿ ರೈಲ್ವೇ ಇಲಾಖೆಯ ಅಧಿಕಾರಿಗಳ ಬಗ್ಗೆ ನಿಗಾ ಇಟ್ಟಿದ್ದು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಇದೀಗ ರೈಲು ದುರಂತ ನಡೆದಿರುವ ಬಹನಾಗ ರೈಲ್ವೇ ನಿಲ್ದಾಣದ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಗೇಟ್ ಮ್ಯಾನ್ ಅನ್ನು ವಶಕ್ಕೆ ಪಡೆದು ಗ್ರಿಲ್ ನಡೆಸುತ್ತಿದ್ದಾರೆ.ಇದೇ ವೇಳೆ ಬಹನಾಗ ಪೊಲೀಸ್ ಠಾಣೆಯನ್ನೂ ಸೀಲ್ ಮಾಡಲಾಗಿದೆ. ಅಲ್ಲದೆ, ವಿಧಿ ವಿಜ್ಞಾನ ತಜ್ಞರು ಸ್ಥಳದಿಂದ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಪತ್ತೆ ಮಾಡಿದ್ದಾರೆ. ಬಹನಾಗ ಬಝಾರ್ ರೈಲು ನಿಲ್ದಾಣದಲ್ಲಿ ಸಿಬಿಐ ಅನುಮತಿಯಿಲ್ಲದೆ ಯಾವುದೇ ರೈಲು ನಿಲ್ಲದಂತೆ ಸೂಚನೆ ನೀಡಲಾಗಿದೆ.
ಇದಲ್ಲದೆ, ರೈಲು ನಿಲ್ದಾಣದ ಎಲ್ಲ ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರೈಲು ದುರಂತ ನಡೆದ ಜೂನ್ 2ರಂದು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ವ್ಯಕ್ತಿಗಳು, ಎಕ್ಸ್ ಚೇಂಜ್ ಬುಕ್ ನಲ್ಲಿ ನಮೂದಾಗಿರುವ ಖಾಸಗಿ ವ್ಯಕ್ತಿಗಳ ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿದ್ದಾರೆ. ರೈಲು ನಿಲ್ದಾಣದ ರಿಲೇ ರೂಮ್, ಪ್ಯಾನೆಲ್ ರೂಮ್, ಡಾಟಾ ಲಾಕರ್ ಕೊಠಡಿಯನ್ನು ಪೂರ್ತಿ ವಶಕ್ಕೆ ಪಡೆದಿದ್ದಾರೆ. ಜೂನ್ 2ರಂದು ಸಂಜೆ 7 ಗಂಟೆ ಸುಮಾರಿಗೆ ಬಹನಾಗ ರೈಲು ನಿಲ್ದಾಣದ ಎದುರಲ್ಲೇ ಮೂರು ರೈಲುಗಳು ಒಂದಕ್ಕೊಂದು ಡಿಕ್ಕಿಯಾಗಿ 288 ಜನರು ಸಾವಿಗೀಡಾಗಿದ್ದ ಘಟನೆ ನಡೆದಿತ್ತು.
Odisha Train Tragedy CBI detains Bahanaga Assistant Station Manager Four others Seals Accident Site.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm