ಬ್ರೇಕಿಂಗ್ ನ್ಯೂಸ್
13-06-23 05:33 pm HK News Desk ದೇಶ - ವಿದೇಶ
ಚೆನ್ನೈ, ಜೂನ್ 13: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ದೊಡ್ಡ ಬಿರುಕು ಮೂಡಿಸುವ ಸಾಧ್ಯತೆ ಕಂಡುಬಂದಿದೆ.
ಜಯಲಲಿತಾ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಆಗಿದ್ದರು ಎಂಬ ಅಣ್ಣಾಮಲೈ ಹೇಳಿಕೆಯ ಬಗ್ಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷರು ದುರುದ್ದೇಶದಿಂದ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು. ಅಣ್ಣಾಮಲೈ ಅವರ ಹೇಳಿಕೆ ಬೇಜವಾಬ್ದಾರಿಯದ್ದಾಗಿದೆ, ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಕ್ರಾಂತಿಕಾರಿ ನಾಯಕಿ ಮತ್ತು ಇಧಯ ದೈವಂ (ಜಯಲಲಿತಾ ಅವರನ್ನು ಅನುಯಾಯಿಗಳು ಪ್ರೀತಿಯಿಂದ ಕರೆಯುವ ಹೃದಯದ ದೇವತೆ ಎಂಬ ವ್ಯಾಖ್ಯಾನ ) ಖ್ಯಾತಿಗೆ ಯೋಜಿತ ರೀತಿಯಲ್ಲಿ ಕಳಂಕ ತಂದಿದ್ದಾರೆಂದು ತಮಿಳುನಾಡಿನ ವಿವಿಧ ಜಿಲ್ಲೆಗಳ ಎಐಡಿಎಂಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ. ಪಳನಿಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.
ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಇಂಗ್ಲೀಷ್ ದೈನಿಕವೊಂದಕ್ಕೆ ಸೋಮವಾರ ಸಂದರ್ಶನ ನೀಡಿದ್ದ ಅಣ್ಣಾಮಲೈ, ತಮಿಳುನಾಡನ್ನು ಆಳಿದ್ದ ಹಲವು ಆಡಳಿತಗಳು ಭ್ರಷ್ಟವಾಗಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದ್ದೂ ಇದೆ. ಹಾಗಾಗಿ ತಮಿಳುನಾಡು ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂದು ಹೆಸರಾಗಿದೆ. ಜಯಲಲಿತಾ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ 1991-96ರ ನಡುವಿನ ಅವಧಿಯಲ್ಲಿ ತಮಿಳುನಾಡು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿತ್ತೆಂದು ಹೇಳುತ್ತೇನೆ ಎಂಬುದಾಗಿ ಅಣ್ಣಾಮಲೈ ಹೇಳಿದ್ದರು.
ಭ್ರಷ್ಟಾಚಾರ ಕುರಿತ ಅಣ್ಣಾಮಲೈ ಹೇಳಿಕೆಗೆ ಎಐಎಡಿಎಂಕೆ ವಿರೋಧ ವ್ಯಕ್ತಪಡಿಸಿದ್ದು ನಾಯಕರು ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಈ ರೀತಿ ಬೆಳವಣಿಗೆ ಆಗಿರುವುದು ಬಿಜೆಪಿಗೆ ಹಿನ್ನಡೆಯಾಗುತ್ತಾ ಎನ್ನುವ ಚರ್ಚೆಗೆ ಗ್ರಾಸವಾಗಿದೆ.
Tamil Nadu’s main Opposition party AIADMK Tuesday passed a resolution against state BJP president K Annamalai over his remarks against former chief minister and party supremo, the late J Jayalalithaa.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm