ಬ್ರೇಕಿಂಗ್ ನ್ಯೂಸ್
13-06-23 05:33 pm HK News Desk ದೇಶ - ವಿದೇಶ
ಚೆನ್ನೈ, ಜೂನ್ 13: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ದೊಡ್ಡ ಬಿರುಕು ಮೂಡಿಸುವ ಸಾಧ್ಯತೆ ಕಂಡುಬಂದಿದೆ.
ಜಯಲಲಿತಾ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಆಗಿದ್ದರು ಎಂಬ ಅಣ್ಣಾಮಲೈ ಹೇಳಿಕೆಯ ಬಗ್ಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷರು ದುರುದ್ದೇಶದಿಂದ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು. ಅಣ್ಣಾಮಲೈ ಅವರ ಹೇಳಿಕೆ ಬೇಜವಾಬ್ದಾರಿಯದ್ದಾಗಿದೆ, ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಕ್ರಾಂತಿಕಾರಿ ನಾಯಕಿ ಮತ್ತು ಇಧಯ ದೈವಂ (ಜಯಲಲಿತಾ ಅವರನ್ನು ಅನುಯಾಯಿಗಳು ಪ್ರೀತಿಯಿಂದ ಕರೆಯುವ ಹೃದಯದ ದೇವತೆ ಎಂಬ ವ್ಯಾಖ್ಯಾನ ) ಖ್ಯಾತಿಗೆ ಯೋಜಿತ ರೀತಿಯಲ್ಲಿ ಕಳಂಕ ತಂದಿದ್ದಾರೆಂದು ತಮಿಳುನಾಡಿನ ವಿವಿಧ ಜಿಲ್ಲೆಗಳ ಎಐಡಿಎಂಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ. ಪಳನಿಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.
ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಇಂಗ್ಲೀಷ್ ದೈನಿಕವೊಂದಕ್ಕೆ ಸೋಮವಾರ ಸಂದರ್ಶನ ನೀಡಿದ್ದ ಅಣ್ಣಾಮಲೈ, ತಮಿಳುನಾಡನ್ನು ಆಳಿದ್ದ ಹಲವು ಆಡಳಿತಗಳು ಭ್ರಷ್ಟವಾಗಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದ್ದೂ ಇದೆ. ಹಾಗಾಗಿ ತಮಿಳುನಾಡು ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂದು ಹೆಸರಾಗಿದೆ. ಜಯಲಲಿತಾ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ 1991-96ರ ನಡುವಿನ ಅವಧಿಯಲ್ಲಿ ತಮಿಳುನಾಡು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿತ್ತೆಂದು ಹೇಳುತ್ತೇನೆ ಎಂಬುದಾಗಿ ಅಣ್ಣಾಮಲೈ ಹೇಳಿದ್ದರು.
ಭ್ರಷ್ಟಾಚಾರ ಕುರಿತ ಅಣ್ಣಾಮಲೈ ಹೇಳಿಕೆಗೆ ಎಐಎಡಿಎಂಕೆ ವಿರೋಧ ವ್ಯಕ್ತಪಡಿಸಿದ್ದು ನಾಯಕರು ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಈ ರೀತಿ ಬೆಳವಣಿಗೆ ಆಗಿರುವುದು ಬಿಜೆಪಿಗೆ ಹಿನ್ನಡೆಯಾಗುತ್ತಾ ಎನ್ನುವ ಚರ್ಚೆಗೆ ಗ್ರಾಸವಾಗಿದೆ.
Tamil Nadu’s main Opposition party AIADMK Tuesday passed a resolution against state BJP president K Annamalai over his remarks against former chief minister and party supremo, the late J Jayalalithaa.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm