ಬ್ರೇಕಿಂಗ್ ನ್ಯೂಸ್
17-06-23 12:28 pm HK News Desk ದೇಶ - ವಿದೇಶ
ಇಂಫಾಲ, ಜೂನ್ 17: ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ.
ಕ್ವಾಥಾ ಮತ್ತು ಕಾಂಗ್ವೈ ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಲಾಗಿದ್ದು , ಇಂದು ಬೆಳಗಿನ ಜಾವದವರೆಗೂ ನಿರಂತರ ಗುಂಡಿನ ದಾಳಿಗಳು ನಡೆದಿವೆ ಎಂದು ವರದಿಗಳು ತಿಳಿಸಿವೆ.
ಸೇನೆ, ಅಸ್ಸಾಂ ರೈಫಲ್ಸ್, ರ್ಯಾಪಿಡ್ ಆಕ್ಷನ್ ಫೋರ್ಸ್ ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮಧ್ಯರಾತ್ರಿಯವರೆಗೆ ಧ್ವಜ ಮೆರವಣಿಗೆಯನ್ನು ಕೈಗೊಂಡವು.

ಈ ನಡುವೆ ಅಡ್ವಾನ್ಸ್ ಆಸ್ಪತ್ರೆ ಬಳಿಯ ಅರಮನೆ ಕಾಂಪೌಂಡ್ ನಲ್ಲಿ ಬೆಂಕಿ ಹಚ್ಚುವ ಯತ್ನ ನಡೆದಿದೆ. ಸುಮಾರು 1,000 ಜನರ ಗುಂಪು ನಿನ್ನೆ ಸಂಜೆ ಒಟ್ಟುಗೂಡಿದ್ದು, ಬೆಂಕಿ ಮತ್ತು ವಿಧ್ವಂಸಕ ಕೃತ್ಯಕ್ಕೆ ಪ್ರಯತ್ನಿ ನಡೆಸಿದೆ.
ಈ ವೇಳೆ ಗುಂಪನ್ನು ಚದುರಿಸಲು ಆರ್ಎಎಫ್ ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಹಾರಿಸಿದ್ದು, ಇದರಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದರ ಜೊತೆಗೆ ಮಣಿಪುರ ವಿಶ್ವವಿದ್ಯಾನಿಲಯದ ಬಳಿಯೂ ಜನರು ಗುಂಪು ಸೇರಿದ್ದಾರೆ. ರಾತ್ರಿ 10.40ಕ್ಕೆ ತೊಂಗ್ಜು ಬಳಿ ಜಮಾಯಿಸಿದ 200ರಿಂದ 300 ಮಂದಿ, ಸ್ಥಳೀಯ ಶಾಸಕರ ನಿವಾಸವನ್ನು ಧ್ವಂಸಗೊಳಿಸಲು ಯತ್ನ ನಡೆಸಿದ್ದಾರೆ. ಈ ವೇಳೆ ಆರ್'ಎಎಫ್ ಗುಂಪನ್ನು ಚದುರಿಸಿತು.
ಮಧ್ಯರಾತ್ರಿ ಇಂಫಾಲ್ ವೆಸ್ಟ್ನಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಅಧಿಕಾರಿಮಯುಮ್ ಶಾರದಾ ದೇವಿ ಅವರ ನಿವಾಸವನ್ನು ಧ್ವಂಸ ಮಾಡಲು ಗುಂಪು ಪ್ರಯತ್ನಿಸಿತು, ಆದರೆ, ಈ ಪ್ರಯತ್ನವನ್ನು ಸೇನೆ ಮತ್ತು ಆರ್ಎಎಫ್ ವಿಫಲಗೊಳ್ಳುವಂತೆ ಮಾಡಿದೆ.
ಈ ನಡುವೆ ಉದ್ರಿಕ್ತ ಗುಂಪೊಂದು ಮಣಿಪುರದ ತೊಂಗ್ಜುನಲ್ಲಿರುವ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದೆ.
Two civilians were injured as mobs clashed with security forces overnight in Imphal town and attempts were made to torch the houses of BJP leaders, officials said on Saturday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm