ಬ್ರೇಕಿಂಗ್ ನ್ಯೂಸ್
31-10-20 09:44 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 31: ನಾಯಿ ಮನುಷ್ಯನ ನಂಬಿಕಸ್ಥ ಪ್ರಾಣಿ ಅಂತಾರೆ. ಕೆಲವರಿಗಂತೂ ನಾಯಿಯೇ ಪ್ರಾಣ ಸ್ನೇಹಿತ. ಇಂಥಾ ನಾಯಿ ಮುಂಬೈನಲ್ಲೊಂದು ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಆಗಂತುಕನಿಂದ ಪಾರು ಮಾಡಿದ ಸುದ್ದಿ ಬಂದಿದೆ.
ಆಕೆ 33 ವರ್ಷದ ಮಹಿಳೆ. ಗಂಡ ಇತ್ತೀಚೆಗೆ ತೀರಿಕೊಂಡಿದ್ದರಿಂದ ಏಳು ವರ್ಷದ ಪುತ್ರಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಎರಡು ದಿನಗಳ ಹಿಂದೆ 25 ವರ್ಷದ ಯುವಕನೊಬ್ಬ ತನ್ನ ಅಂಗಿ ತೆಗೆದು ಬರೀಯ ಚಡ್ಡಿಯಲ್ಲಿ ಮನೆಯ ಒಳಗೆ ಎಂಟ್ರಿ ಕೊಟ್ಟಿದ್ದ. ರಾತ್ರಿ ವೇಳೆ, ಕಿಟಕಿ ಹಾರಿ ಕಳ್ಳದಾರಿಯಿಂದ ಮನೆಯ ಒಳಗೆ ಬಂದಿದ್ದ. ಆದರೆ, ಯುವಕ ಕಳ್ಳದಾರಿಯಿಂದ ಎಂಟ್ರಿ ಕೊಟ್ಟಿದ್ದು ಮನೆ ಒಳಗಿದ್ದ ನಾಯಿಗೆ ಗೊತ್ತಾಗಿದೆ. ಕೂಡಲೇ ನಾಯಿ ಬೌ ಬೌ ಎಂದಿದ್ದು, ಮಹಿಳೆಯನ್ನು ಎಚ್ಚರಿಸಿದೆ.
ಮಹಿಳೆ ಕೂಡಲೇ ಪೊಲೀಸರಿಗೆ ಫೋನಾಯಿಸಿ, ದೂರು ನೀಡಿದ್ದಾಳೆ. ಅಷ್ಟೊತ್ತಿಗೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೆ, ಪೊಲೀಸರು ಆಗಮಿಸಿ ಅಲ್ಲಿನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 25 ವರ್ಷದ ಸಾದಾರ್ ಆಲಂ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪುರುಷರಿಲ್ಲದ ವಿಚಾರ ತಿಳಿದಿದ್ದ ಆಲಂ, ಮಹಿಳೆಯ ಬೆನ್ನು ಬಿದ್ದಿದ್ದ. ಬೆನ್ನ ಹಿಂದೆ ತಿರುಗಾಡುತ್ತಾ ಆಸೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದ. ಆದರೆ, ಮಹಿಳೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಮಹಿಳೆಯ ಮನೆಗೆ ನುಗ್ಗಿ ರಿವೇಂಜ್ ತೀರಿಸಿಕೊಳ್ಳಲು ಕಳ್ಳದಾರಿಯಲ್ಲಿ ಎಂಟ್ರಿ ಕೊಟ್ಟಿದ್ದ. ಆದರೆ, ಮಹಿಳೆಯ ನಂಬಿಕಸ್ಥ ನಾಯಿ ಕಳ್ಳನ ಬಗ್ಗೆ ಎಚ್ಚರಿಸಿ, ಆರೋಪಿಯನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಬೈನ ಪೊವಾಯಿ ಏರಿಯಾದಲ್ಲಿ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm