ಬ್ರೇಕಿಂಗ್ ನ್ಯೂಸ್
02-11-20 11:30 am Headline Karnataka News Network ದೇಶ - ವಿದೇಶ
ಶ್ರೀನಗರ, ನವೆಂಬರ್ 02: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಶನಲ್ ಚೀಫ್ ಆಗಿದ್ದ ಡಾ.ಸೈಫುಲ್ಲಾ ಸೇನಾ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.
ಜಮ್ಮು ಕಾಶ್ಮೀರದ ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ ಸೈಫುಲ್ಲಾ ಹತನಾಗಿದ್ದಾನೆ. ಈ ವೇಳೆ ಆತನ ಜೊತೆಗಿದ್ದ ಉಗ್ರನನ್ನು ಭದ್ರತಾ ಪಡೆಗಳು ಜೀವಂತವಾಗಿ ವಶಕ್ಕೆ ಪಡೆದಿವೆ ಎಂದು ಐಜಿಪಿ ವಿಜಯ ಕುಮಾರ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಗಳು ರಂಗ್ರೆತ್ ಏರಿಯಾದಲ್ಲಿ ಮೂವರು ಉಗ್ರರು ಅಡಗಿಕೊಂಡಿರುವುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಒಬ್ಬಾತ ಜೀವಂತ ಸೆರೆಸಿಕ್ಕಿದ್ದಾನೆ. ಈ ವೇಳೆ ಸೈಫುಲ್ಲಾ ಮಿರ್ ಎಂಬಾತ ಸಾವನ್ನಪ್ಪಿದ್ದಾನೆ.


ಸೈಫುಲ್ಲಾ ಮಿರ್ ಗಾಝಿ ಹೈದರ್ ಅಲಿಯಾಸ್ ಡಾಕ್ಟರ್ ಸಾಹಬ್ 2014ರಲ್ಲಿ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ್ದ. ಪುಲ್ವಾಮಾ ಜಿಲ್ಲೆಯ ಮಲಾಂಗ್ ಪೋರಾ ನಿವಾಸಿಯಾಗಿರುವ ಸೈಫುಲ್ಲಾನನ್ನು ರಿಯಾಜ್ ನೈಕು ಎಂಬ ಉಗ್ರ ಹಿಜ್ಬುಲ್ ಸಂಘಟನೆ ಸೇರ್ಪಡೆ ಮಾಡಿದ್ದ. ಅಲ್ಲದೆ, ಸೈಫುಲ್ಲಾನಿಗೆ ಗಾಝಿ ಹೈದರ್ ಎಂದು ನಾಮಕರಣ ಮಾಡಿದ್ದ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಆಗಿದ್ದ ರಿಯಾಜ್ ನೈಕು ಕಳೆದ ಮೇ ತಿಂಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ. ಆಬಳಿಕ ಸೈಫುಲ್ಲಾ ಕಮಾಂಡರ್ ಆಗಿ ಸಂಘಟನೆಯನ್ನು ಮುನ್ನಡೆಸುತ್ತಿದ್ದ.
ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಹತ್ತು ಉಗ್ರರಲ್ಲಿ ಸೈಫುಲ್ಲಾ ಒಬ್ಬ. ಭದ್ರತಾ ಪಡೆಗಳು ಇತ್ತೀಚೆಗಷ್ಟೇ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ ರೆಡಿ ಮಾಡಿತ್ತು. ಜಮ್ಮು ಕಾಶ್ಮೀರದಲ್ಲಿ ನಡೆದ ಹಲವು ಉಗ್ರರ ದಾಳಿ ಪ್ರಕರಣಗಳಲ್ಲಿ ಸೈಫುಲ್ಲಾ ಮಾಸ್ಟರ್ ಮೈಂಡ್ ಆಗಿದ್ದ. ಈತನನ್ನು ಕೊಂದಿದ್ದಕ್ಕೆ ಡಿಜಿಪಿ ದಿಲ್ ಬಾಘ್, ಭದ್ರತಾ ಪಡೆ ಮತ್ತು ಪೊಲೀಸರನ್ನು ಅಭಿನಂದಿಸಿದ್ದಾರೆ.
Hizbul Mujahideen militant commander Saifullah Mir was killed in an encounter with security forces on the outskirts of Srinagar district Sunday.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm