ಬ್ರೇಕಿಂಗ್ ನ್ಯೂಸ್
02-11-20 11:30 am Headline Karnataka News Network ದೇಶ - ವಿದೇಶ
ಶ್ರೀನಗರ, ನವೆಂಬರ್ 02: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಶನಲ್ ಚೀಫ್ ಆಗಿದ್ದ ಡಾ.ಸೈಫುಲ್ಲಾ ಸೇನಾ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.
ಜಮ್ಮು ಕಾಶ್ಮೀರದ ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ ಸೈಫುಲ್ಲಾ ಹತನಾಗಿದ್ದಾನೆ. ಈ ವೇಳೆ ಆತನ ಜೊತೆಗಿದ್ದ ಉಗ್ರನನ್ನು ಭದ್ರತಾ ಪಡೆಗಳು ಜೀವಂತವಾಗಿ ವಶಕ್ಕೆ ಪಡೆದಿವೆ ಎಂದು ಐಜಿಪಿ ವಿಜಯ ಕುಮಾರ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಗಳು ರಂಗ್ರೆತ್ ಏರಿಯಾದಲ್ಲಿ ಮೂವರು ಉಗ್ರರು ಅಡಗಿಕೊಂಡಿರುವುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಒಬ್ಬಾತ ಜೀವಂತ ಸೆರೆಸಿಕ್ಕಿದ್ದಾನೆ. ಈ ವೇಳೆ ಸೈಫುಲ್ಲಾ ಮಿರ್ ಎಂಬಾತ ಸಾವನ್ನಪ್ಪಿದ್ದಾನೆ.


ಸೈಫುಲ್ಲಾ ಮಿರ್ ಗಾಝಿ ಹೈದರ್ ಅಲಿಯಾಸ್ ಡಾಕ್ಟರ್ ಸಾಹಬ್ 2014ರಲ್ಲಿ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ್ದ. ಪುಲ್ವಾಮಾ ಜಿಲ್ಲೆಯ ಮಲಾಂಗ್ ಪೋರಾ ನಿವಾಸಿಯಾಗಿರುವ ಸೈಫುಲ್ಲಾನನ್ನು ರಿಯಾಜ್ ನೈಕು ಎಂಬ ಉಗ್ರ ಹಿಜ್ಬುಲ್ ಸಂಘಟನೆ ಸೇರ್ಪಡೆ ಮಾಡಿದ್ದ. ಅಲ್ಲದೆ, ಸೈಫುಲ್ಲಾನಿಗೆ ಗಾಝಿ ಹೈದರ್ ಎಂದು ನಾಮಕರಣ ಮಾಡಿದ್ದ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಆಗಿದ್ದ ರಿಯಾಜ್ ನೈಕು ಕಳೆದ ಮೇ ತಿಂಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ. ಆಬಳಿಕ ಸೈಫುಲ್ಲಾ ಕಮಾಂಡರ್ ಆಗಿ ಸಂಘಟನೆಯನ್ನು ಮುನ್ನಡೆಸುತ್ತಿದ್ದ.
ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಹತ್ತು ಉಗ್ರರಲ್ಲಿ ಸೈಫುಲ್ಲಾ ಒಬ್ಬ. ಭದ್ರತಾ ಪಡೆಗಳು ಇತ್ತೀಚೆಗಷ್ಟೇ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ ರೆಡಿ ಮಾಡಿತ್ತು. ಜಮ್ಮು ಕಾಶ್ಮೀರದಲ್ಲಿ ನಡೆದ ಹಲವು ಉಗ್ರರ ದಾಳಿ ಪ್ರಕರಣಗಳಲ್ಲಿ ಸೈಫುಲ್ಲಾ ಮಾಸ್ಟರ್ ಮೈಂಡ್ ಆಗಿದ್ದ. ಈತನನ್ನು ಕೊಂದಿದ್ದಕ್ಕೆ ಡಿಜಿಪಿ ದಿಲ್ ಬಾಘ್, ಭದ್ರತಾ ಪಡೆ ಮತ್ತು ಪೊಲೀಸರನ್ನು ಅಭಿನಂದಿಸಿದ್ದಾರೆ.
Hizbul Mujahideen militant commander Saifullah Mir was killed in an encounter with security forces on the outskirts of Srinagar district Sunday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm