ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm