ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm