ಬ್ರೇಕಿಂಗ್ ನ್ಯೂಸ್
05-07-23 04:40 pm HK News Desk ದೇಶ - ವಿದೇಶ
ಕೋಹಿಮಾ ಜು 05: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ರಾಜ್ಯವಾದ ನಾಗಾಲ್ಯಾಂಡ್ನಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಭೂ ಕುಸಿತವಾದ ವರದಿಗಳಾಗಿವೆ. ಆದರೆ ಮಂಗಳವಾರ ನಡೆದ ದುರಂತದಲ್ಲಿ ಬಂಡೆಗಳು ಕಾರಿನ ಮೇಲೆ ಉರುಳಿ ಇಬ್ಬರನ್ನು ಬಲಿ ಪಡೆದುಕೊಂಡಿವೆ.
ಇಲ್ಲಿನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಧ್ವಂಸಗೊಳಿಸಿವೆ. ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಇನ್ನು ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹಿಮಾದಿಂದ ಬರುತ್ತಿದ್ದ ವಾಹನಗಳು, ಪೊಲೀಸ್ ತಪಾಸಣೆ ಸ್ಥಳದಲ್ಲಿ ನಿಲ್ಲಿಸಿದ್ದಾಗ ಈ ದುರ್ಘಟನೆ ನಡೆದಿದೆ. ಬೆಟ್ಟದ ಮೇಲಿಂದ ಉರುಳಿ ಬರುವ ಬಂಡೆಗಳು ಕಾರನ್ನು ಧ್ವಂಸಗೊಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಂದು ಬಂಡೆ ಎರಡು ಕಾರುಗಳನ್ನು ಧ್ವಂಸಗೊಳಿಸಿದರೆ, ಅದರ ಮುಂದೆ ನಿಂತಿದ್ದ ಇನ್ನೊಂದು ಕಾರಿಗೆ ಮತ್ತೊಂದು ಬೃಹತ್ ಬಂಡೆ ಅಪ್ಪಳಿಸಿ ಕಾರು ಪಲ್ಟಿಯಾಗಿ ಪಕ್ಕದಲ್ಲಿ ನಿಂತಿದ್ದ ಟ್ರಕ್ಗೆ ಅಪ್ಪಳಿಸುತ್ತದೆ. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Horrible video of landslide in Nagaland.!
— Dr. Jitendra Nagar (@NagarJitendra) July 4, 2023
😳😳😳 pic.twitter.com/EuwzpgANth
Massive boulders rolled down and smashed three cars on the Kohima-Dimapur National Highway during a landslide amid rain on Tuesday. The incident took place in Chumoukedima, near a police checkpost. At least two people were killed, and three others were injured in the incident.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm