ಬ್ರೇಕಿಂಗ್ ನ್ಯೂಸ್
05-07-23 04:40 pm HK News Desk ದೇಶ - ವಿದೇಶ
ಕೋಹಿಮಾ ಜು 05: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ರಾಜ್ಯವಾದ ನಾಗಾಲ್ಯಾಂಡ್ನಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಭೂ ಕುಸಿತವಾದ ವರದಿಗಳಾಗಿವೆ. ಆದರೆ ಮಂಗಳವಾರ ನಡೆದ ದುರಂತದಲ್ಲಿ ಬಂಡೆಗಳು ಕಾರಿನ ಮೇಲೆ ಉರುಳಿ ಇಬ್ಬರನ್ನು ಬಲಿ ಪಡೆದುಕೊಂಡಿವೆ.
ಇಲ್ಲಿನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಧ್ವಂಸಗೊಳಿಸಿವೆ. ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಇನ್ನು ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹಿಮಾದಿಂದ ಬರುತ್ತಿದ್ದ ವಾಹನಗಳು, ಪೊಲೀಸ್ ತಪಾಸಣೆ ಸ್ಥಳದಲ್ಲಿ ನಿಲ್ಲಿಸಿದ್ದಾಗ ಈ ದುರ್ಘಟನೆ ನಡೆದಿದೆ. ಬೆಟ್ಟದ ಮೇಲಿಂದ ಉರುಳಿ ಬರುವ ಬಂಡೆಗಳು ಕಾರನ್ನು ಧ್ವಂಸಗೊಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಂದು ಬಂಡೆ ಎರಡು ಕಾರುಗಳನ್ನು ಧ್ವಂಸಗೊಳಿಸಿದರೆ, ಅದರ ಮುಂದೆ ನಿಂತಿದ್ದ ಇನ್ನೊಂದು ಕಾರಿಗೆ ಮತ್ತೊಂದು ಬೃಹತ್ ಬಂಡೆ ಅಪ್ಪಳಿಸಿ ಕಾರು ಪಲ್ಟಿಯಾಗಿ ಪಕ್ಕದಲ್ಲಿ ನಿಂತಿದ್ದ ಟ್ರಕ್ಗೆ ಅಪ್ಪಳಿಸುತ್ತದೆ. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Horrible video of landslide in Nagaland.!
— Dr. Jitendra Nagar (@NagarJitendra) July 4, 2023
😳😳😳 pic.twitter.com/EuwzpgANth
Massive boulders rolled down and smashed three cars on the Kohima-Dimapur National Highway during a landslide amid rain on Tuesday. The incident took place in Chumoukedima, near a police checkpost. At least two people were killed, and three others were injured in the incident.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm