ಬ್ರೇಕಿಂಗ್ ನ್ಯೂಸ್
06-07-23 08:20 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 6: ಮಧ್ಯಪ್ರದೇಶದ ಮೂತ್ರ ವಿಸರ್ಜನೆ ಪ್ರಕರಣದ ಸಂತ್ರಸ್ತ, ಆದಿವಾಸಿ ಜನಾಂಗದ ದಶ್ಮತ್ ರಾವತ್ ಎಂಬ ವ್ಯಕ್ತಿಯ ಪಾದವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೊಳೆಯುವ ಮೂಲಕ ಪ್ರಾಯಶ್ಚಿತ್ತ ರೂಪದ ಕಾರ್ಯ ಮಾಡಿದ್ದಾರೆ.
ಭೋಪಾಲ್ ನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಪ್ರಕರಣದ ಸಂತ್ರಸ್ತನನ್ನು ಕರೆಸಿಕೊಂಡ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆತನ ಪಾದ ತೊಳೆದಿದ್ದಾರೆ. ಆಮೂಲಕ ಸಾರ್ವಜನಿಕ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
ಸಂತ್ರಸ್ತನನ್ನು ಕುರ್ಚಿಯಲ್ಲಿ ಕೂರಿಸಿ, ಮುಖ್ಯಮಂತ್ರಿ ಕೆಳಗೆ ಕುಳಿತು ಪಾದ ತೊಳೆಯುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದೆ. ಬಳಿಕ ಸಂತ್ರಸ್ತನಿಗೆ ಶಾಲು ಹೊದಿಸಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನರ ವೋಟು ಕಳೆದುಕೊಳ್ಳಬಾರದು ಎನ್ನುವ ದೃಷ್ಟಿಯಿಂದ ತಂತ್ರಗಾರಿಕೆ ಭಾಗವಾಗಿ ಈ ರೀತಿ ಮಾಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಬಿಜೆಪಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಆರೋಪಿ ಪ್ರವೇಶ್ ಶುಕ್ಲಾ ಸಿಗರೇಟ್ ಸೇದುತ್ತಾ, ಸಿಧಿ ಜಿಲ್ಲೆಯ ಕುಬರಿ ಮಾರುಕಟ್ಟೆಯಲ್ಲಿ ಕುಳಿತಿದ್ದ ಆದಿವಾಸಿ ವ್ಯಕ್ತಿಯನ್ನು ನಿಂದಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕ್ರಮ ಜರುಗಿಸಲು ಮುಂದಾಗಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಮಂಗಳವಾರ (ಜುಲೈ 4) ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದರು.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಜುಲೈ 5ರಂದು ಆತನಿಗೆ ಸೇರಿದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿತ್ತು. ಶುಕ್ಲಾ ವಿರುದ್ಧ ಸೆಕ್ಷನ್ 294, 504 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯಿದೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The victim of the Sidhi urination incident on Thursday said he felt good after meeting Madhya Pradesh chief minister Shivraj Singh Chouhan at his residence in Bhopal.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm