ಬ್ರೇಕಿಂಗ್ ನ್ಯೂಸ್
07-07-23 06:15 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 07: ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 3 ಬೋಗಿಗಳು ಬೆಂಕಿಗಾಹುತಿಯಾಗಿರುವ ಘಟನೆ ತೆಲಂಗಾಣದ ಹೈದರಾಬಾದ್ ಸಮೀಪ ನಡೆದಿದೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂರು ಬೋಗಿಗಳು ಸುಟ್ಟು ಕರಕಲಾಗಿದೆ.
ಲೋಕೋ ಪೈಲಟ್ ಎಚ್ಚರಿಕೆ ನೀಡಿದ ನಂತರ ಪಗಿಡಿಪಲ್ಲಿ ಮತ್ತು ಬೊಮ್ಮಾಯಪಲ್ಲಿ ನಡುವೆ ಬರುತ್ತಿದ್ದ ಈ ರೈಲನ್ನು ನಿಲ್ಲಿಸಲಾಯಿತು. ಎಲ್ಲ ಪ್ರಯಾಣಿಕರು ತಕ್ಷಣವೇ ರೈಲಿನಿಂದ ಇಳಿದರು. ಒಂದು ಕೋಚ್ನಿಂದ ಪ್ರಾರಂಭವಾದ ಬೆಂಕಿ ಇತರ ಮೂರು ಬೋಗಿಗಳಿಗೆ ವ್ಯಾಪಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. S4, S5, S6 ಎಂಬ ಮೂರು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆ ಸಿಪಿಆರ್ಒ ಸಿಎಚ್ ರಾಕೇಶ್ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ್ದ ಭೀಕರ ರೈಲು ದುರಂತ ಇನ್ನೂ ನಮ್ಮ ಕಣ್ಣಮುಂದಿದೆ. ಜೂನ್ 2 ರಂದು ಒಡಿಶಾದ ಬಾಲಾಸೋರ್ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್ಪ್ರೆಸ್ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದಿತ್ತು. ಈ ಭೀಕರ ರೈಲು ಅಪಘಾತದಲ್ಲಿ 288 ಜನರು ಬಲಿಯಾಗಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
![]()
ಮೃತರ ಪ್ರತಿ ಕುಟುಂಬಕ್ಕೆ ಕೇಂದ್ರ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 5 ಲಕ್ಷ ರೂಪಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಒಟ್ಟು 17 ಲಕ್ಷ ಪರಿಹಾರ ಘೋಷಿಸಿದ್ದರು.
ಈ ಘಟನೆ ನಡೆದ 5 ದಿನಗಳ ಬೆನ್ನಲ್ಲೇ ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದರು. , ಅಪಘಾತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದರು. ಒಡಿಶಾದ ಜಾಜ್ಪುರ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು. ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಮೃತರು ಹಾಗೂ ಗಾಯಾಳುಗಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
A fire broke out in the three coaches of Falaknuma Express between Bommaipally and Pagidipally in Telangana, following which it was stopped. All passengers deboarded the train and no injuries were reported.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm