ಬ್ರೇಕಿಂಗ್ ನ್ಯೂಸ್
10-07-23 03:32 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 10: ಭಾರತದಲ್ಲಿಯೇ ನಿರ್ಮಾಣವಾಗುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹೈ ಸ್ಪೀಡ್ ರೈಲಿನ 28ನೇ ಆವೃತ್ತಿಯು ಕೇಸರಿ ಬಣ್ಣದ್ದಾಗಿರುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಕೇಸರಿ ವರ್ಣದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇನ್ನೂ ಕಾರ್ಯಾಚರಣೆಗೆ ಇಳಿದಿಲ್ಲ. ಅದು ಪ್ರಸ್ತುತ ವಂದೇ ಭಾರತ್ ರೈಲುಗಳು ತಯಾರಾಗುವ ತಮಿಳುನಾಡಿನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ಐಸಿಎಫ್) ಸಿದ್ಧವಾಗಿ ನಿಂತಿದೆ. ಇದುವರೆಗಿನ ರೈಲುಗಳು ಬಿಳಿ ಹಾಗೂ ನೀಲಿ ಬಣ್ಣವನ್ನು ಹೊಂದಿದ್ದವು. ಈ ಹೊಸ ರೈಲು ಬಿಳಿ ಮತ್ತು ಕೇಸರಿ ಬಣ್ಣ ಹೊಂದಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ನ 25 ರೈಲುಗಳು ತಮ್ಮ ನಿಯೋಜಿತ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ಎರಡು ರೈಲುಗಳನ್ನು ಮೀಸಲು ಇರಿಸಲಾಗಿದೆ. 28ನೇ ರೈಲಿನ ಬಣ್ಣವನ್ನು ಪ್ರಾಯೋಗಿಕ ಆಧಾರದಲ್ಲಿ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಪರಿಶೀಲನೆ ನಡೆಸಿದರು. ದಕ್ಷಿಣ ರೈಲ್ವೇಸ್ನ ಸುರಕ್ಷತಾ ಕ್ರಮಗಳನ್ನು ಪರಾಮರ್ಶಿಸಿದರು. ಜತೆಗೆ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿನ ಸುಧಾರಣೆಗಳ ಪರಾಮರ್ಶೆ ಸಹ ನಡೆಸಿದರು.
ತಪಾಸಣೆ ಮುಗಿಸಿದ ನಂತರ ಮಾತನಾಡಿದ ಅಶ್ವಿನಿ ವೈಷ್ಣವ್, ಸ್ವದೇಶಿ ನಿರ್ಮಿದ 28ನೇ ರೈಲಿನ ಹೊಸ ಬಣ್ಣವು ಭಾರತದ ತ್ರಿವರ್ಣ ಧ್ವಜದಿಂದ ಸ್ಫೂರ್ತಿ ಪಡೆದಿದೆ ಎಂದು ತಿಳಿಸಿದರು.
ಇದು ಮೇಕ್ ಇನ್ ಇಂಡಿಯಾದ ಪರಿಕಲ್ಪನೆ. ಅಂದರೆ, ನಮ್ಮ ಎಂಜಿನಿಯರ್ಗಳು ಮತ್ತು ತಂತ್ರಜ್ಞರಿಂದ ಭಾರತದಲ್ಲಿಯೇ ವಿನ್ಯಾಸಗೊಳ್ಳುವುದು. ಹೀಗಾಗಿ ವಂದೇ ಭಾರತ್ ಕಾರ್ಯಾಚರಣೆ ಸಂದರ್ಭದಲ್ಲಿ ಎಸಿಗಳು, ಶೌಚಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಫೀಲ್ಡ್ ಯುನಿಟ್ಗಳಿಂದ ಬರುವ ಅಭಿಪ್ರಾಯಗಳು ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡುವಂತಹ ಸುಧಾರಣೆಗಳನ್ನು ತರುವುದಕ್ಕೆ ಸಹಾಯವಾಗುತ್ತದೆ" ಎಂದು ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹೊಸ ಸುರಕ್ಷತಾ ಫೀಚರ್, 'ಆಂಟಿ ಕ್ಲೈಂಬರ್ಸ್' ಅಥವಾ 'ಆಂಟಿ ಕ್ಲೈಂಬಿಂಗ್ ಡಿವೈಸ್' ಎಂಬುದರ ಬಗ್ಗೆ ನಾವು ಕೆಲಸ ಮಾಡುತ್ತಿದ್ದು, ಅವುಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ವಂದೇ ಭಾರತ್ ಹಾಗೂ ಇತರೆ ರೈಲುಗಳಲ್ಲಿ ಇದು ನಿರ್ದಿಷ್ಟ ಲಕ್ಷಣಗಳಲ್ಲಿ ಸೇರ್ಪಡೆಯಾಗಲಿದೆ" ಎಂದು ತಿಳಿಸಿದರು.
Railway officials have announced that the 28th rake of the Vande Bharat Express will be painted in a saffron color. Currently, the new saffron Vande Bharat Express is not yet operational and is stationed at the Integral Coach Factory (ICF) in Chennai, where the semi-high-speed trains are manufactured.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm