ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm