ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm