ಬ್ರೇಕಿಂಗ್ ನ್ಯೂಸ್
14-07-23 06:44 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 14: ಭಾರತ ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲು ಹೊರಟಿದೆ. ಚಂದ್ರನ ಮೇಲ್ಮೈ ಸ್ಪರ್ಶಿಸಲು ಎರಡನೇ ಪ್ರಯತ್ನ ಆರಂಭಿಸಿದ್ದು ಶುಕ್ರವಾರ ಚಂದ್ರನತ್ತ ಯಶಸ್ವಿಯಾಗಿ ಉಪಗ್ರಹ ಉಡಾವಣೆ ಮಾಡಿದೆ.
ಚಂದ್ರನ ಮೇಲೆ ಗುರಿಯಿಟ್ಟ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಜಿಎಸ್ ಎಲ್ ವಿ ಮಾರ್ಕ್ 3 ಉಡಾವಣಾ ನೌಕೆಯು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14ರ ಮಧ್ಯಾಹ್ನ 2.35ಕ್ಕೆ ಆಗಸಕ್ಕೆ ಹಾರಿದೆ. ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್ಎಲ್ವಿ ಮಾರ್ಕ್ - 3 ಚಂದ್ರನ ಮೇಲೆ ಇಳಿಯಬೇಕಾದ ಲ್ಯಾಂಡರ್ ವಿಕ್ರಮ್ ಅನ್ನು ಹೊತ್ತು ಸಾಗಿದ್ದು ಈ ಪ್ರಯಾಣವು 40 ದಿನಗಳದ್ದೆಂದು ಅಂದಾಜು ಹಾಕಲಾಗಿದೆ. ಆಗಸ್ಟ್ 23 ಅಥವಾ 24 ರ ವೇಳೆಗೆ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ನಿರೀಕ್ಷೆಯಿದೆ. ಅದಕ್ಕೂ ಮೊದಲು ಆಗಸ್ಟ್ 5ರ ವೇಳೆಗೆ ಚಂದ್ರನ ಕಕ್ಷೆ ಸೇರುವ ತವಕದಲ್ಲಿ ಇಸ್ರೋ ವಿಜ್ಞಾನಿಗಳಿದ್ದಾರೆ. ಚಂದ್ರನ ಕಕ್ಷೆ ಸೇರಿದ ಬಳಿಕ ನೆಲ ಸ್ಪರ್ಶಿಸುವ ವರೆಗಿನ ಪ್ರಯಾಣ ನಿಧಾನ ಗತಿಯಲ್ಲಿರಲಿದೆ.
ಸದ್ಯಕ್ಕೆ ಉಪಗ್ರಹ ಉಡಾವಣೆ ಯಶಸ್ವಿಯಾಗಿದ್ದು ನೌಕೆ ನಭಕ್ಕೆ ಹಾರಿದ 900 ಸೆಕೆಂಡ್ ಅಂತರದಲ್ಲಿ ಉಡಾವಣಾ ವಾಹಕದಿಂದ ಉಪಗ್ರಹವು ಪ್ರತ್ಯೇಕಗೊಂಡು ಬಾಹ್ಯಾಕಾಶ ಕಕ್ಷೆಯಲ್ಲಿ ಚಲಿಸಲಾರಂಭಿಸಿದೆ. ಆದರೆ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವುದು ಸವಾಲಾಗಿದೆ. 2019ರಲ್ಲಿ ಇದೇ ರೀತಿ ಚಂದ್ರಯಾನ-2 ಕೈಗೊಳ್ಳಲಾಗಿತ್ತು. ಆದರೆ ಉಡ್ಡಯನಗೊಂಡು ಚಂದ್ರನ ಮೇಲ್ಮೈನಲ್ಲಿ ಇಳಿಯುವ ಕೊನೆಕ್ಷಣದಲ್ಲಿ ಭೂಮಿಯ ಸಂಪರ್ಕವನ್ನು ಕಡಿದುಕೊಂಡಿದ್ದರಿಂದ ಯೋಜನೆ ವಿಫಲಗೊಂಡಿತ್ತು. ಚಂದ್ರನ ಮೇಲೆ ನೌಕೆ ಇಳಿಸುವುದು ಸಫಲವಾದಲ್ಲಿ ಈ ಸಾಧನೆ ಮಾಡಿದ ಜಗತ್ತಿನ ನಾಲ್ಕನೇ ದೇಶ ಭಾರತವಾಗಲಿದೆ. ಅಮೆರಿಕ, ಚೀನಾ, ರಷ್ಯಾ ಮಾತ್ರ ಈವರೆಗೆ ಈ ಸಾಧನೆ ಮಾಡಿದೆ. ಆಮೂಲಕ ಭಾರತವೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಶಗಳ ಎಲೈಟ್ ಗ್ರೂಪ್ ಸೇರಲಿದೆ. ಇದಕ್ಕೆಲ್ಲ ಸೌರಮಂಡಲದ ಚೈತನ್ಯಶಕ್ತಿ ಸೂರ್ಯನ ಸಹಕಾರವೇ ಮುಖ್ಯವಾಗಿದ್ದು ಸೂರ್ಯದೇವ ಸಹಕರಿಸಿದಲ್ಲಿ ಭಾರತೀಯರ ಸಾಧನೆ ಚಂದ್ರನ ಅಂಗಳ ತಲುಪಲಿದೆ.
ಚಂದ್ರನ ಭೂಪ್ರದೇಶದಲ್ಲಿ ಇಳಿಯುವ ಈ ನೌಕೆಯು, ಹಲವು ಸಂಶೋಧನೆಗಳನ್ನು ನಡೆಸಲಿದೆ. ಅಲ್ಲಿನ ಮಾಹಿತಿ, ದತ್ತಾಂಶಗಳನ್ನು ಇಸ್ರೋ ನಿಯಂತ್ರಣ ಕೇಂದ್ರಕ್ಕೆ ರವಾನೆ ಮಾಡಲಿದೆ. 615 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು ಇದು ಯಶಸ್ವಿಯಾದರೆ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿರುವ ಪ್ಲಾಸ್ಮಾ ಸಾಂದ್ರತೆ, ವಾತಾವರಣ ಮತ್ತು ಅದರಲ್ಲಿರುವ ವ್ಯತ್ಯಾಸವನ್ನು ಪತ್ತೆ ಮಾಡಲಿದೆ. ಇದಲ್ಲದೆ, ಚಂದ್ರನ ಮೇಲ್ಮೈನ ತಾಪಮಾನವನ್ನು ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈನಲ್ಲಿ ಆಗಬಲ್ಲ ಕಂಪನಗಳ ಬಗ್ಗೆ ಅಧ್ಯಯನ ನಡೆಸಲಿದೆ. ಚಂದ್ರನಲ್ಲಿರುವ ಖನಿಜಗಳು, ಮಣ್ಣು ಮತ್ತು ಅವುಗಳ ರಾಸಾಯನಿಕ ಮಿಶ್ರಣವನ್ನು ಅಧ್ಯಯನ ನಡೆಸಲು ರೋವರ್ನಲ್ಲಿ ವಿಶೇಷ ತಂತ್ರಜ್ಞಾನ ಅಳವಡಿಕೆಯಾಗಿದೆ. ಅದೇ ರೀತಿ ಚಂದ್ರನಲ್ಲಿರುವ ನೀರಿನ ಅಂಶದ ಕುರಿತು ಅಧ್ಯಯನ ನಡೆಸಲಿದೆ.
Successful launch of #Chandrayaan3
— Gaurav Taneja (@flyingbeast320) July 14, 2023
at SriHariKota #JaiHind pic.twitter.com/G8uTV6CtPd
The Chandrayaan-3 mission by the Indian Space Research Organisation (ISRO) successfully lifted off from the Satish Dhawan Space Centre in Sriharikota, Andhra Pradesh, at 2.35 PM IST on Friday, July 14. The mission follows Chandrayaan-2 where scientists aim to demonstrate various capabilities including reaching the orbit of the moon, making a soft-landing on the lunar surface using a lander, and a rover coming out of the lander to study the surface of the moon.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm