ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm