ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm