ಬ್ರೇಕಿಂಗ್ ನ್ಯೂಸ್
30-07-20 03:36 pm Special Correspondant ದೇಶ - ವಿದೇಶ
ನವದೆಹಲಿ, ಜುಲೈ 30: ಯುವರಾಜ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲು ಪಕ್ಷದ ಸಂಸದರಿಂದಲೇ ಒತ್ತಡ ಕೇಳಿಬಂದಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಮ್ಮಿಕೊಂಡ ವರ್ಚುವಲ್ ಮೀಟ್ ನಲ್ಲಿ ಪಕ್ಷದ ಸಂಸದರು ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಹುದ್ದೆಗೆ ಏರಬೇಕು ಎಂದು ಒತ್ತಾಯಿಸಿದ ಬೆಳವಣಿಗೆ ನಡೆದಿದೆ.
ದೇಶದ ಸದ್ಯದ ರಾಜಕೀಯ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಸೋನಿಯಾ ಗಾಧಿ ಪಕ್ಷದ ಸಂಸದರು ಮತ್ತು ಪ್ರಮುಖರ ಜೊತೆ ವರ್ಚುವಲ್ ಮೀಟ್ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ರಾಜ್ಯಸಭಾ ಸದಸ್ಯರೂ ಆಗಿರುವ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆಗೇರುವಂತೆ ಒತ್ತಾಯ ಮಂಡಿಸಿದ್ದಾರೆ. ದಿಗ್ವಿಜಯ್ ಸಿಂಗ್ ಮಾತಿಗೆ ಇತರೇ ಸಂಸದರೂ ದನಿಗೂಡಿಸಿದ್ದಾರೆ. ರಾಜೀವ್ ಸಾತವ್, ಶಕ್ತಿಸಿನ್ಹ ಗೋಹಿಲ್, ನೀರಜ್ ಡಾಂಗೆ ಸೇರಿದಂತೆ ಹಲವು ಸಂಸದರು ರಾಹುಲ್ ಮತ್ತೆ ಪದವಿಗೇರುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದಸ್ಯ ವೇಣುಗೋಪಾಲ್ ಕೂಡ ಇದೇ ರೀತಿಯ ಒತ್ತಾಯ ಮಾಡಿದ್ದು, ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನರ ಅಭಿಪ್ರಾಯವನ್ನು ಎತ್ತಿಹಿಡಿದಿದೆ. ಆದರೆ ರಾಹುಲ್ ಮತ್ತೆ ಅಧ್ಯಕ್ಷರಾಗಬೇಕು ಎನ್ನುವ ನೆಲೆಯಲ್ಲಿ ಪಕ್ಷದ ಸಂಸದರಿಂದ ಆಗ್ರಹ ಕೇಳಿಬಂದಿದೆ. ಜುಲೈ 11ರಂದು ರಾಹುಲ್ ಗಾಂಧಿ ಎದುರಲ್ಲಿಯೇ ಲೋಕಸಭಾ ಸದಸ್ಯರಾದ ಮಾಣಿಕ್ಕಂ ಠಾಗೋರ್, ಗೌರವ್ ಗೊಗೋಯಿ ಮತ್ತಿತರರ ಸಂಸದರೂ ಇದೇ ರೀತಿಯ ಒತ್ತಾಯ ಮಾಡಿದ್ದರು. ರಾಹುಲ್ ಮಾತ್ರ ಈ ವಿಚಾರದಲ್ಲಿ ಮೌನವಾಗೇ ಇದ್ದರು ಎಂದು ಸಭೆಯಲ್ಲಿ ಸೋನಿಯಾ ಗಾಂಧಿ ಗಮನಕ್ಕೆ ತಂದಿದ್ದಾರೆ.
ಅಂದಹಾಗೆ, ಇದೇ ಆಗಸ್ಟ್ 10ಕ್ಕೆ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಲಿದ್ದಾರೆ. ಇದಕ್ಕೂ ಮುನ್ನ ಸೋನಿಯಾ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆಯೇ ಅಥವಾ ಬೇರೊಬ್ಬರನ್ನು ಆಯ್ಕೆ ಮಾಡಲಿದ್ದಾರೆಯೇ ಎನ್ನುವುದು ಖಚಿತವಾಗಲಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂದು ಒತ್ತಾಯ ಕೇಳಿಬಂದಿದ್ದು ಮತ್ತೆ ಯುವರಾಜ ಪಟ್ಟ ಅಲಂಕರಿಸಲಿದ್ದಾರೆಯೇ ಎನ್ನುವ ಕುತೂಹಲ ಉಂಟಾಗಿದೆ. 2019ರ ಲೋಕಸಭೆ ಚುನಾವಣೆ ಸೋಲಿನ ನಂತರ ರಾಹುಲ್ ಪಕ್ಷಾಧ್ಯಕ್ಷ ಹುದ್ದೆ ತ್ಯಜಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm