ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am