ಬ್ರೇಕಿಂಗ್ ನ್ಯೂಸ್
19-07-23 10:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: INDIA ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಹೆಚ್ಚು ಗುರುತಿಸಿಕೊಳ್ಳುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹೀಗಾಗಿ ಮೈತ್ರಿ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ 'ಇಂಡಿಯಾ' (Indian National Developmental Inclusive Alliance) ಎಂಬ ಹೆಸರು ಘೋಷಿಸಿದ್ದವು.
ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ 'ಇಂಡಿಯಾ' ಎಂಬ ಪದವನ್ನು ಬಳಸುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.
ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, 'ಇಂಡಿಯಾ' ಹೆಸರನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆ ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
A police complaint was registered against 26 Opposition parties at Barakhamba Police Station in Delhi for alleged improper use of the name of INDIA and use of the said name for the undue influence and personation at elections," news agency ANI reported.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 11:58 am
Mangalore Correspondent
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am