ಬ್ರೇಕಿಂಗ್ ನ್ಯೂಸ್
20-07-23 01:14 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಎರಡು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಮಣಿಪುರ ರಾಜ್ಯವೇ ಸುಟ್ಟು ಕರಕಲಾಗಿದೆ. ಇದೀಗ ರಾಜ್ಯ ಶಾಂತಿಯತ್ತ ಮರಳುತ್ತಿರುವಾಗಲೇ ಮೇ 4 ರಂದು ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕೆಲವು ಕಡೆ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.
ರಾಜಧಾನಿ ಇಂಫಾಲ್ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಿಳೆಯರು ಕಣ್ಣೀರಿಡುತ್ತಾ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಸತತ ಪ್ರಯತ್ನಗಳ ಬಳಿಕ ಹಿಂಸಾಚಾರ ತಣ್ಣಗಾಗಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಚಾರವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು. ಇದೀಗ ವಿಕೃತು ಮೆರೆದಿರುವ ವಿಡಿಯೋ ಹೊರ ಬಂದಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಕೋರ್ಟ್ ಕಿಡಿಕಾರಿತ್ತು.
ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್ಐಆರ್ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ.
A video showing two women being paraded naked by a mob in the violence-hit northeastern state of Manipur has sparked outrage in India. The police say they have opened a case of gang rape and arrested a man, adding that others will be held soon.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm