ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm