ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
![]()
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm