ಬ್ರೇಕಿಂಗ್ ನ್ಯೂಸ್
31-07-23 06:02 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಜುಲೈ 31: ಜಾಮಿಯತ್ ಉಲೇಮಾ ಇಸ್ಲಾಂ-ಫಜಲ್(ಜೆಯುಐ-ಎಫ್) ಪಕ್ಷದ ನಾಯಕರು ನಡೆಸುತ್ತಿದ್ದ ಸಭೆ ಮೇಲೆ ನಡೆದ ಬಾಂಬ್ ದಾಳಿಯಲ್ಲಿ 39 ಮಂದಿ ಮೃತಪಟ್ಟು. 123 ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ ಜರುಗಿದೆ.
ಬಾಂಬ್ ಸ್ಫೋಟದಲ್ಲಿ ಜಾಮಿಯತ್ ಉಲೇಮಾ ಇಸ್ಲಾಂ-ಫಜಲ್ ಪಕ್ಷದ ಪ್ರಭಾವಿ ನಾಯಕ ಮೌಲಾನಾ ಜಿಯಾವುಲ್ಲಾಜಾನ್ ಮೃತಪಟ್ಟಿದ್ದಾರೆ. ಗಾಯಗೊಂಡಿರುವ 123 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಜೌರ್ ಜಿಲ್ಲಾತುರ್ತು ನಿರ್ವಹಣಾ ಅಧಿಕಾರಿ ಸಾದಾ ಖಾನ್ ಮಾಹಿತಿ ನೀಡಿದ್ದಾರೆ.


ಮುಂಬರುವ ಪಾಕಿಸ್ತಾನದ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆಗೆ ಜೆಯುಐ-ಎಫ್ ಸಿದ್ಧತೆ ನಡೆಸಿತ್ತು. ಚುನಾವಣಾ ಪೂರ್ವಭಾವಿಯಾಗಿ ಅಫಘಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿತ್ತು.
ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸಂಜೆ 4 ಗಂಟೆಗೆ ಸ್ಫೋಟ ಸಂಭವಿಸಿದೆ. ಅಲ್ಲಿ 400 ಕ್ಕೂ ಹೆಚ್ಚು ಪಕ್ಷದ ಸದಸ್ಯರು ಉಪಸ್ಥಿತರಿದ್ದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಾಗಿರುವುದರಿಂದ ಟೋಲ್ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಂಭೀರ ಗಾಯಾಳುಗಳನ್ನು ಉತ್ತಮ ವೈದ್ಯಕೀಯ ಆರೈಕೆಗಾಗಿ ಪ್ರಾಂತೀಯ ರಾಜಧಾನಿ ಪೇಶಾವರಕ್ಕೆ ವಿಮಾನದಲ್ಲಿ ಸಾಗಿಸಲಾಗುತ್ತಿದೆ ಎಂದು ಸರ್ಕಾರಿ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನೂನು ಜಾರಿ ಸಂಸ್ಥೆಗಳು ಪ್ರದೇಶವನ್ನು ಸುತ್ತುವರಿದಿವೆ. ಐದು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. 2021 ರಲ್ಲಿ ನೆರೆಯ ಅಫ್ಘಾನಿಸ್ತಾನದಲ್ಲಿ ಅಫ್ಘಾನ್ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನವು ಭಯೋತ್ಪಾದಕ ದಾಳಿಗಳಲ್ಲಿ ತೀವ್ರ ಏರಿಕೆ ಕಂಡಿದೆ.
At least 39 people died and nearly 200 were wounded after a suicide bomber set off a major blast at a Jamiat Ulema Islam-Fazl (JUI-F) convention. The bomb blast was reported in the Khar tehsil of Khyber Pakhtunkhwa’s Bajaur district during a political convention. According to the reports, a local JUI-F leader has also been killed in the Pakistan bomb blast.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm