ಬ್ರೇಕಿಂಗ್ ನ್ಯೂಸ್
31-07-23 06:02 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಜುಲೈ 31: ಜಾಮಿಯತ್ ಉಲೇಮಾ ಇಸ್ಲಾಂ-ಫಜಲ್(ಜೆಯುಐ-ಎಫ್) ಪಕ್ಷದ ನಾಯಕರು ನಡೆಸುತ್ತಿದ್ದ ಸಭೆ ಮೇಲೆ ನಡೆದ ಬಾಂಬ್ ದಾಳಿಯಲ್ಲಿ 39 ಮಂದಿ ಮೃತಪಟ್ಟು. 123 ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ ಜರುಗಿದೆ.
ಬಾಂಬ್ ಸ್ಫೋಟದಲ್ಲಿ ಜಾಮಿಯತ್ ಉಲೇಮಾ ಇಸ್ಲಾಂ-ಫಜಲ್ ಪಕ್ಷದ ಪ್ರಭಾವಿ ನಾಯಕ ಮೌಲಾನಾ ಜಿಯಾವುಲ್ಲಾಜಾನ್ ಮೃತಪಟ್ಟಿದ್ದಾರೆ. ಗಾಯಗೊಂಡಿರುವ 123 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಜೌರ್ ಜಿಲ್ಲಾತುರ್ತು ನಿರ್ವಹಣಾ ಅಧಿಕಾರಿ ಸಾದಾ ಖಾನ್ ಮಾಹಿತಿ ನೀಡಿದ್ದಾರೆ.
ಮುಂಬರುವ ಪಾಕಿಸ್ತಾನದ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆಗೆ ಜೆಯುಐ-ಎಫ್ ಸಿದ್ಧತೆ ನಡೆಸಿತ್ತು. ಚುನಾವಣಾ ಪೂರ್ವಭಾವಿಯಾಗಿ ಅಫಘಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿತ್ತು.
ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸಂಜೆ 4 ಗಂಟೆಗೆ ಸ್ಫೋಟ ಸಂಭವಿಸಿದೆ. ಅಲ್ಲಿ 400 ಕ್ಕೂ ಹೆಚ್ಚು ಪಕ್ಷದ ಸದಸ್ಯರು ಉಪಸ್ಥಿತರಿದ್ದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಾಗಿರುವುದರಿಂದ ಟೋಲ್ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಂಭೀರ ಗಾಯಾಳುಗಳನ್ನು ಉತ್ತಮ ವೈದ್ಯಕೀಯ ಆರೈಕೆಗಾಗಿ ಪ್ರಾಂತೀಯ ರಾಜಧಾನಿ ಪೇಶಾವರಕ್ಕೆ ವಿಮಾನದಲ್ಲಿ ಸಾಗಿಸಲಾಗುತ್ತಿದೆ ಎಂದು ಸರ್ಕಾರಿ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನೂನು ಜಾರಿ ಸಂಸ್ಥೆಗಳು ಪ್ರದೇಶವನ್ನು ಸುತ್ತುವರಿದಿವೆ. ಐದು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. 2021 ರಲ್ಲಿ ನೆರೆಯ ಅಫ್ಘಾನಿಸ್ತಾನದಲ್ಲಿ ಅಫ್ಘಾನ್ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನವು ಭಯೋತ್ಪಾದಕ ದಾಳಿಗಳಲ್ಲಿ ತೀವ್ರ ಏರಿಕೆ ಕಂಡಿದೆ.
At least 39 people died and nearly 200 were wounded after a suicide bomber set off a major blast at a Jamiat Ulema Islam-Fazl (JUI-F) convention. The bomb blast was reported in the Khar tehsil of Khyber Pakhtunkhwa’s Bajaur district during a political convention. According to the reports, a local JUI-F leader has also been killed in the Pakistan bomb blast.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm