ಬ್ರೇಕಿಂಗ್ ನ್ಯೂಸ್
03-08-23 06:19 pm HK News Desk ದೇಶ - ವಿದೇಶ
ಅಲಹಾಬಾದ್, ಆಗಸ್ಟ್ 3 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಪ್ರಕರಣದಲ್ಲಿ ಖಚಿತ ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ ಎಂದು ತೀರ್ಪು ನೀಡಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ಬಳಿಕ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷೆಗೆ ಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದುಗಳ ಪರವಾಗಿ ವಾದಿಸಿದ್ದ ವಕೀಲ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಮಸೀದಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರು ತಮಗೆ ಪೂಜೆಗೆ ಅವಕಾಶ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿತ್ತು. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇದರೊಳಗೆ ಶಿವನ ದೇಗುಲವಿದೆ ಎಂದು ಹಿಂದುಗಳ ಕಡೆಯ ವಕೀಲರು ವಾದಿಸಿದ್ದರು.
he Allahabad High Court, on Thursday, upheld a Varanasi court’s order allowing the Archaeological Survey of India (ASI) to conduct a survey of the Gyanvapi mosque complex, and dismissed the Muslim side’s petition challenging the survey. Chief Justice Pritinker Diwaker said that the Varanasi court was justified in ordering the ASI survey and that the scientific survey is necessary in the interest of justice.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm